ಮಂಡ್ಯ

ಮಂಡ್ಯ: ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಮಂಡ್ಯ: ಇಲ್ಲಿನ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್‌ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದ ಭರತ್‌, ಕಳೆದ ತಡರಾತ್ರಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಮ್ಸ್ ನಿರ್ದೇಶಕ ಡಾ. ನರಸಿಂಹಸ್ವಾಮಿ ಪ್ರತಿಕ್ರಿಯೆ ನೀಡಿದ್ದು,  ರಾತ್ರಿ 12 ಗಂಟೆಯವರೆಗೆ ಭರತ್ ಪಕ್ಕದ ರೂಂನಲ್ಲಿ ಸ್ನೇಹಿತರೊಂದಿಗೆ ಮಾತಾಡಿದ್ದಾನೆ. ಬಳಿಕ ತನ್ನ ರೂಂಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಜೊತೆ ರೂಂ‌ನಲ್ಲಿ ಇಬ್ಬರು ಇದ್ದರು. ನಿನ್ನೆ ಅವರಿಬ್ಬರು ಊರಿಗೆ ಹೋಗಿದ್ದರು. ಬೆಳಿಗ್ಗೆ ಒಬ್ಬ ವಿದ್ಯಾರ್ಥಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಭರತ್ ಫುಟ್ಬಾಲ್ ಆಟದಲ್ಲಿ ಮುಂದೆ ಇದ್ದ. ಕಳೆದ ವರ್ಷ ಭರತ್ ಹೆಚ್ಚು ಕಾಲೇಜಿಗೆ ಅಟೆಂಡ್ ಆಗಿಲ್ಲ. ಹೀಗಾಗಿ ಮೊದಲ ವರ್ಷದ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿರಲಿಲ್ಲ. ಈ ವರ್ಷ ಪರೀಕ್ಷೆಗಳನ್ನು ಕ್ಲಿಯರ್ ಮಾಡಿಕೊಳ್ಳಬೇಕು ಅಂದುಕೊಂಡಿದ್ದ. ಹೀಗಾಗಿ ಪರೀಕ್ಷಾ ಶುಲ್ಕ ಕಟ್ಟಲು ಭರತ್ ಹಾಸ್ಟೆಲ್‌ಗೆ ಬಂದಿದ್ದ.
ರಾತ್ರಿ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ‌ತಿಳಿದುಬಂದಿಲ್ಲ. ಸದ್ಯ ಪೋಷಕರಿಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

9 mins ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

5 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

5 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

5 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

5 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

5 hours ago