ಮಂಡ್ಯ

ಮಂಡ್ಯ: ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಮಂಡ್ಯ: ಇಲ್ಲಿನ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್‌ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದ ಭರತ್‌, ಕಳೆದ ತಡರಾತ್ರಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಮ್ಸ್ ನಿರ್ದೇಶಕ ಡಾ. ನರಸಿಂಹಸ್ವಾಮಿ ಪ್ರತಿಕ್ರಿಯೆ ನೀಡಿದ್ದು,  ರಾತ್ರಿ 12 ಗಂಟೆಯವರೆಗೆ ಭರತ್ ಪಕ್ಕದ ರೂಂನಲ್ಲಿ ಸ್ನೇಹಿತರೊಂದಿಗೆ ಮಾತಾಡಿದ್ದಾನೆ. ಬಳಿಕ ತನ್ನ ರೂಂಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಜೊತೆ ರೂಂ‌ನಲ್ಲಿ ಇಬ್ಬರು ಇದ್ದರು. ನಿನ್ನೆ ಅವರಿಬ್ಬರು ಊರಿಗೆ ಹೋಗಿದ್ದರು. ಬೆಳಿಗ್ಗೆ ಒಬ್ಬ ವಿದ್ಯಾರ್ಥಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಭರತ್ ಫುಟ್ಬಾಲ್ ಆಟದಲ್ಲಿ ಮುಂದೆ ಇದ್ದ. ಕಳೆದ ವರ್ಷ ಭರತ್ ಹೆಚ್ಚು ಕಾಲೇಜಿಗೆ ಅಟೆಂಡ್ ಆಗಿಲ್ಲ. ಹೀಗಾಗಿ ಮೊದಲ ವರ್ಷದ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿರಲಿಲ್ಲ. ಈ ವರ್ಷ ಪರೀಕ್ಷೆಗಳನ್ನು ಕ್ಲಿಯರ್ ಮಾಡಿಕೊಳ್ಳಬೇಕು ಅಂದುಕೊಂಡಿದ್ದ. ಹೀಗಾಗಿ ಪರೀಕ್ಷಾ ಶುಲ್ಕ ಕಟ್ಟಲು ಭರತ್ ಹಾಸ್ಟೆಲ್‌ಗೆ ಬಂದಿದ್ದ.
ರಾತ್ರಿ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ‌ತಿಳಿದುಬಂದಿಲ್ಲ. ಸದ್ಯ ಪೋಷಕರಿಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

11 mins ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

40 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

3 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

3 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

7 hours ago