Mysore
29
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ಮಂಡ್ಯ: ಕಾವೇರಿ ನದಿಗೆ ಹಾರಿ ಎಂಸಿಎ ಪದವೀಧರೆ ಆತ್ಮಹತ್ಯೆ

suicide

ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ ನಡೆದಿದ್ದು, ಯುವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

24 ವರ್ಷದ ಸಿಂಚನಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಪ್ರಸಾದಹಳ್ಳಿ ಗ್ರಾಮದ ಮಂಜುನಾಥ್‌ ಎಂಬುವವರ ಪುತ್ರಿಯಾಗಿರುವ ಸಿಂಚನಾ ಕೆಲ ವರ್ಷಗಳಿಂದ ಪಿಸಿಓಡಿ ಸಮಸ್ಯೆಯಿಂದ ಬಳಲುತ್ತಿದ್ದರು.

ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದ ಅವರು, ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯುವತಿ ಕುಟುಂಬಕ್ಕೆ ಸುದ್ದಿ ಮುಟ್ಟಿಸಲಾಗಿದ್ದು, ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!