ಮಂಡ್ಯ: ಎಂ.ಆರ್.ಐ ಹಾಗೂ ಸಿ.ಟಿ ಸ್ಕ್ಯಾನ್ ಆದ ನಂತರ ರೋಗಿಗಳ ವರದಿ ನೀಡಲು ಮೂರರಿಂದ ಐದು ದಿನ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಖಾಲಿ ಇರುವ ರೆಡಿಯಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿ ಟೆಲಿ ಸರ್ವಿಸ್ ಉಪಯೋಗಿಸಿಕೊಂಡು ಒಂದು ದಿನದೊಳಗಾಗಿ ವರದಿ ನೀಡುವ ವ್ಯವಸ್ಥೆ ಮಾಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಧಿಕಾರಿಗಳ ಸಭೆ ನಡೆಸಿದ ಅವರು, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳ ಖಾತೆಗೆ ಸರಿಯಾಗಿ ಸಂಬಳ, ಪಿಎಫ್ ಜಮೆಯಾಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ. ಇದರ ಬಗ್ಗೆ ದೂರುಗಳು ಕೇಳಿಬಂದಲ್ಲಿ ಶಿಸ್ತು ಕ್ರಮ ವಹಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ವೈದ್ಯರು ತಮ್ಮ ಕಾಲೇಜಿನ ಕೆಲಸ ನಿರ್ವಹಿಸಬೇಕಿರುವ ಸಮಯದಲ್ಲಿ ಹೊರಗೆ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳಲ್ಲಿ ಕಾರ್ಯನಿರ್ವಹಿಸುವುದು ಕಂಡುಬಂದಿದ್ದಲ್ಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವು. ಆಸ್ಪತ್ರೆಯಲ್ಲಿ ಹಾಜರಾತಿಗೆ ಬಯೋಮೆಟ್ರಿಕ್ ಅಳವಡಿಸಿದ್ದು, ಇನ್ನು ಮುಂದೆ ಮಧ್ಯಾಹ್ನದ ವೇಳೆ ಸಹ ಈ ಹಾಜರಾತಿ ಸಂಗ್ರಹಿಸಲು ಆಸ್ಪತ್ರೆಯ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…