ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶನಿವಾರ(ಜು.6) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕೆ.ಆರ್.ಎಸ್ ಅಣೆಕಟ್ಟಿನ ಹತ್ತಿರ ಟ್ರಯಲ್ ಬ್ಲಾಸ್ಟ್ ನಡೆಸುವ ಸಂಬಂಧ ರೈತರೊಂದಿಗೆ ಚರ್ಚೆ ನಡೆಸಿದರು.
ಚರ್ಚೆಯಲ್ಲಿ ಭಾಗವಹಿಸಿದ ರೈತರು ತಮ್ಮ ಅಭಿಪ್ರಾಯ ಮಂಡಿಸಿದರು. ಅಣೆಕಟ್ಟು ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಒಕ್ಕೊರಲೆಯಿಂದ ರೈತ ನಾಯಕರು ಹೇಳಿದರು. ಸಚಿವರು ರೈತ ಮುಖಂಡರ ಎಲ್ಲಾ ಅಭಿಪ್ರಾಯಗಳನ್ನು ಸಂಗ್ರಹಿಸಿದರು.
ಚರ್ಚೆಯಲ್ಲಿ ಭಾಗವಹಿಸಿದ ರೈತ ಮುಖಂಡರಾದ ಕೆಂಪೂಗೌಡ ಮಾತನಾಡಿ, ಅಣೆಕಟ್ಟು ಕಟ್ಟುವುದು ಕಷ್ಟಕರ, ಇರುವ ಅಣೆಕಟ್ಟನ್ನು ಸಂರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ಕೆ.ಆರ್.ಎಸ್ ಸುತ್ತ ಗಣಿಗಾರಿಕೆ ನಡೆಸುವುದಿಲ್ಲ ಎಂದು ಸರ್ಕಾರದಿಂದ ಸುಗ್ರಿವಾಜ್ಞೆ ಹೊರಡಿಸಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಡ್ಯಾಮ್ ಸೆಫ್ಟಿ ಆಕ್ಟ್ (Dam safety act) ಪ್ರಕಾರ ರಾಜ್ಯದಲ್ಲಿರುವ ಎಲ್ಲಾ ಅಣೆಕಟ್ಟುಗಳ ರಕ್ಷಣೆ ಮಾಡಲು ಹೊಸ ಕಾನೂನುಗಳನ್ನು ಜಾರಿಗೆ ತರಬೇಕು. ತಂತ್ರಜ್ಞಾನ ಮುಂದುವರಿದಿದೆ, ಒಂದು ಟ್ರಯಲ್ ಬ್ಲಾಸ್ಟ ನಡೆಸಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಮುಂದೆ ಅನುಮತಿ ನೀಡಿದಾಗ ಹಲವಾರು ಬ್ಲಾಸ್ಟ್ ಗಳ ಸಂದರ್ಭದಲ್ಲಿ ಪರಿಣಾಮ ಬೇರೆ ರೀತಿ ಇರಬಹುದು. ಲಕ್ಷಾಂತರ ಜನಕ್ಕೆ ಜೀವನ ನೀಡುವ ಅಣೆಕಟ್ಟಿನ 25 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡಬಾರದು. ಇದು ಕೇವಲ ಕೆ.ಆರ್.ಎಸ್ ಮಾತ್ರವಲ್ಲ ರಾಜ್ಯದ ಎಲ್ಲಾ ಅಣೆಕಟ್ಟಿಗೆ ಅನ್ವಯಿಸಬೇಕು ಎಂದು ರೈತ ಮುಖಂಡ ಪ್ರಸನ್ನ ಗೌಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…