ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶನಿವಾರ(ಜು.6) ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಕೆ.ಆರ್.ಎಸ್ ಅಣೆಕಟ್ಟಿನ ಹತ್ತಿರ ಟ್ರಯಲ್ ಬ್ಲಾಸ್ಟ್ ನಡೆಸುವ ಸಂಬಂಧ ರೈತರೊಂದಿಗೆ ಚರ್ಚೆ ನಡೆಸಿದರು.
ಚರ್ಚೆಯಲ್ಲಿ ಭಾಗವಹಿಸಿದ ರೈತರು ತಮ್ಮ ಅಭಿಪ್ರಾಯ ಮಂಡಿಸಿದರು. ಅಣೆಕಟ್ಟು ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಒಕ್ಕೊರಲೆಯಿಂದ ರೈತ ನಾಯಕರು ಹೇಳಿದರು. ಸಚಿವರು ರೈತ ಮುಖಂಡರ ಎಲ್ಲಾ ಅಭಿಪ್ರಾಯಗಳನ್ನು ಸಂಗ್ರಹಿಸಿದರು.
ಚರ್ಚೆಯಲ್ಲಿ ಭಾಗವಹಿಸಿದ ರೈತ ಮುಖಂಡರಾದ ಕೆಂಪೂಗೌಡ ಮಾತನಾಡಿ, ಅಣೆಕಟ್ಟು ಕಟ್ಟುವುದು ಕಷ್ಟಕರ, ಇರುವ ಅಣೆಕಟ್ಟನ್ನು ಸಂರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ಕೆ.ಆರ್.ಎಸ್ ಸುತ್ತ ಗಣಿಗಾರಿಕೆ ನಡೆಸುವುದಿಲ್ಲ ಎಂದು ಸರ್ಕಾರದಿಂದ ಸುಗ್ರಿವಾಜ್ಞೆ ಹೊರಡಿಸಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಡ್ಯಾಮ್ ಸೆಫ್ಟಿ ಆಕ್ಟ್ (Dam safety act) ಪ್ರಕಾರ ರಾಜ್ಯದಲ್ಲಿರುವ ಎಲ್ಲಾ ಅಣೆಕಟ್ಟುಗಳ ರಕ್ಷಣೆ ಮಾಡಲು ಹೊಸ ಕಾನೂನುಗಳನ್ನು ಜಾರಿಗೆ ತರಬೇಕು. ತಂತ್ರಜ್ಞಾನ ಮುಂದುವರಿದಿದೆ, ಒಂದು ಟ್ರಯಲ್ ಬ್ಲಾಸ್ಟ ನಡೆಸಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಮುಂದೆ ಅನುಮತಿ ನೀಡಿದಾಗ ಹಲವಾರು ಬ್ಲಾಸ್ಟ್ ಗಳ ಸಂದರ್ಭದಲ್ಲಿ ಪರಿಣಾಮ ಬೇರೆ ರೀತಿ ಇರಬಹುದು. ಲಕ್ಷಾಂತರ ಜನಕ್ಕೆ ಜೀವನ ನೀಡುವ ಅಣೆಕಟ್ಟಿನ 25 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡಬಾರದು. ಇದು ಕೇವಲ ಕೆ.ಆರ್.ಎಸ್ ಮಾತ್ರವಲ್ಲ ರಾಜ್ಯದ ಎಲ್ಲಾ ಅಣೆಕಟ್ಟಿಗೆ ಅನ್ವಯಿಸಬೇಕು ಎಂದು ರೈತ ಮುಖಂಡ ಪ್ರಸನ್ನ ಗೌಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…