ಮಂಡ್ಯ

ಮಂಡ್ಯ: ವಯನಾಡು ಭೂಕುಸಿತದಲ್ಲಿ ಮೃತಪಟ್ಟವರ ಮನೆಗೆ ಸಚಿವ ಎನ್‌.ಚಲುವರಾಯಸ್ವಾಮಿ ಭೇಟಿ, ಸಾಂತ್ವಾನ

ಮಂಡ್ಯ: ವಯನಾಡಿನ ಭೂಕುಸಿತದಲ್ಲಿ ಮೃತ ಪಟ್ಟಿದ್ದ ಕೆ.ಆರ್‌ ಪೇಟೆ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ  ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ‌ಸಚಿವ ಎನ್ ಚಲುವರಾಯಸ್ವಾಮಿ ಅವರು ಶುಕ್ರವಾರ(ಆ.2) ಭೇಟಿ ನೀಡಿ ಸಾಂತ್ವನ ಹೇಳಿದರು.

ಇದೇ ಕುಟುಂಬದ ಮೂರು ಜನರು ವಯನಾಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಹಾಗೂ ಅಗತ್ಯ ಸಹಕಾರ ನೀಡಿ ಸಮನ್ವಯ ವಹಿಸಲು ಕರ್ನಾಟಕ ಸರ್ಕಾರದಿಂದ ಅಧಿಕಾರಿಗಳ ತಂಡ ವಯನಾಡಿಗೆ ತೆರಳಿದ್ದು, ಅವರಿಗೆ ಅಗತ್ಯವಿರುವ ಪ್ರಾಥಮಿಕ ಚಿಕಿತ್ಸೆಯನ್ನು ವಯನಾಡಿನಲ್ಲಿ ಒದಗಿಸಿ ಮುಂದಿನ‌‌ ದಿನಗಳಲ್ಲಿ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ‌ಇದ್ದಲ್ಲಿ ಕರ್ನಾಟಕ ಸರ್ಕಾರದಿಂದ ಒದಗಿಸಲಾಗುವುದು ಎಂದು ಸಚಿವರು ಹೇಳಿದರು.

ರೂ 5 ಲಕ್ಷ ಪರಿಹಾರ
ಮೃತರಾದ ಲೀಲಾವತಿ‌ ಅವರಿಗೆ ಸರ್ಕಾರದಿಂದ 5 ಲಕ್ಷ ಪರಿಹಾರ ವಿತರಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು. ನಿಹಾಲ್ ಅವರು ಚಿಕ್ಕ‌ ವಯಸ್ಸಿನ ಹುಡುಗನಾಗಿದ್ದು, ಆವರಿಗೂ ಸಹ ಸಣ್ಣ ಪ್ರಮಾಣದ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಸಚಿವರು ಇದೇ ಸಂದರ್ಭದಲ್ಲಿ ಅಂತ್ಯಕ್ರಿಯೆ ಹಾಗೂ ಮುಂತಾದ ಕಾರ್ಯಗಳಿಗೆ ಸಹಾಯವಾಗಲಿ ಎಂದು ವೈಯಕ್ತಿಕವಾಗಿ ಧನಸಹಾಯ ಮಾಡಿದರು.

ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago