ಮಂಡ್ಯ

ಮಂಡ್ಯ | ಜಿಲ್ಲಾ ಪತ್ರಕರ್ತರ ಸಂಘದಿಂದ ಮಾದರಿ ಕೆಲಸ; ಎಚ್.ಡಿ ಕುಮಾರಸ್ವಾಮಿ

ಮಂಡ್ಯ:  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರ ಕಷ್ಟ- ಸುಖಗಳಿಗೆ ಸ್ಪಂದಿಸುವ ಮೂಲಕ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾದರಿಯಾಗಿ, ಸದೃಢವಾಗಿ ನಡೆಯುತ್ತಿದೆ. ಸಂಘ ತನ್ನ ಸದಸ್ಯರ ಕಷ್ಟ- ಸುಖಗಳಲ್ಲಿ ಭಾಗಿಯಾಗಿ ಅವರೊಂದಿಗೆ ಇರುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ೩೦ ವರ್ಷಗಳಿಂದ ಸಂಘ ಪತ್ರಕರ್ತರ ನೆರವಿಗೆ ನಿಂತಿದ್ದು, ಯಶಸ್ವಿ ಕೆಲಸ ಮಾಡಿದೆ. ಸಂಘದ ಪದಾಧಿಕಾರಿಗಳು ಉತ್ತಮ ರೀತಿಯ ಸದೃಢವಾಗಿ ಯೋಜನೆಗಳ ಅನುಷ್ಠಾನಕ್ಕೆ ತರಲು ಆರ್ಥಿಕ ಶಕ್ತಿಯನ್ನು ಹೊಂದಿಸಿರುವಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಕ್ಷೇಮಾಭಿವೃದ್ಧಿ ನಿಧಿಗೆ ಸಿಎಸ್‌ಆರ್ ಯೋಜನೆಯಡಿ ೧೦ ಲಕ್ಷ ರೂ.ಗಳ ಅನುದಾನ ಹಾಗೂ ಸಂಸದರ ನಿಧಿಯಿಂದ ಸಂಘದ ಕಟ್ಟಡ ನಿರ್ಮಾಣಕ್ಕೆ ೨೦ ಲಕ್ಷ ಅನುದಾನ ನೀಡುವಂತೆ ಕೋರಿದ್ದಾರೆ. ನಾನು ಈ ಎರಡು ಬೇಡಿಕೆಗಳ ಬಗ್ಗೆ ಶೀಘ್ರವಾಗಿ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಶಾಸಕ ಎಚ್. ಟಿ.ಮಂಜು, ಮಾಜಿ ಶಾಸಕ ಅನ್ನದಾನಿ ಅವರೊಂದಿಗೆ ಚರ್ಚೆ ನಡೆಸಿ ನಿಮ್ಮ ಎರಡು ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವುದಾಗಿ ಭರವಸೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಮ್ ಮಾತನಾಡಿ, ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ಅಂಬರೀಶ್ ಅವರು ಸಂಸದರಾಗಿದ್ದ ಸಂದರ್ಭದಲ್ಲಿ ೮.೫೦ ಲಕ್ಷ ರೂ. ನೀಡಿದ್ದರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಸೇರಿದಂತೆ ಹಲವರು ನಮ್ಮ ಸಂಘದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ನೀಡಿದ ಅನುದಾನದಿಂದ ನಮ್ಮ ಸಂಘಕ್ಕೆ ಸುಸಜ್ಜಿತವಾದ ಕಟ್ಟಡ, ಜಿಮ್ ಹಾಗೂ ಲೈಬ್ರರಿ ಹೊಂದಲು ಸಾಧ್ಯವಾಗಿದೆ. ನಮ್ಮ ಸಂಘ ಇದುವರೆಗೆ ಸುಮಾರು ೩೭ ಲಕ್ಷ ರೂ.ಗೂ ಹೆಚ್ಚು ಪರಿಹಾರ ವಿತರಣೆ ಮಾಡಿದೆ. ಸಂಘದ ಸದಸ್ಯರು ಅಪಘಾತದಲ್ಲಿ ಗಾಯಗೊಂಡಾಗ, ಮರಣ ಹೊಂದಿದಾಗ ಗರಿಷ್ಠ ೫೦ ಸಾವಿರ ರೂ.ಗಳವರೆಗೂ ಸಹಾಯ ಧನ ನೀಡಿದೆ. ಸಂಘದಲ್ಲಿ ಸಕ್ರಿಯವಾಗಿರುವ ಕ್ಷೇಮಾಭಿವೃದ್ಧಿ ನಿಧಿ ಇದ್ದು ಇದಕ್ಕೆ ೧೦ ಲಕ್ಷ ರೂ.ಗಳ ನಿಶ್ಚಿತ ಠೇವಣಿ ಹಾಗೂ ಸಂಸದರ ನಿಧಿಯಿಂದ ಕಟ್ಟಡ ನಿರ್ಮಾಣಕ್ಕೆ ೨೦ ಲಕ್ಷ ರೂ. ಅನುದಾನ ನೀಡುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಹೆಚ್.ಟಿ.ಮಂಜು, ಮಾಜಿ ಶಾಸಕ ಕೆ.ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮನ್‌ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರು, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ (ನಾಗೇಶ್), ಅವರನ್ನು ಅಭಿನಂದಿಸಲಾಯಿತು.

ಈ ವೇಳೆ ಜಿಲ್ಲಾಧ್ಯಕ್ಷ ಬಿ.ಪಿ.ಪ್ರಕಾಶ್, ಉಪಾಧ್ಯಕ್ಷ ಕೆ.ಎನ್.ನವೀನ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್, ಖಜಾಂಚಿ ನಂಜುಂಡಸ್ವಾಮಿ, ರಾಷ್ಟ್ರ ಸಮಿತಿ ಸದಸ್ಯ ಬಾಲಕೃಷ್ಣ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

5 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

5 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

5 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

7 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

7 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

7 hours ago