ಮಂಡ್ಯ

ಮಂಡ್ಯ ಮೈಶುಗರ್‌ ಕಾರ್ಖಾನೆಯ 25 ವರ್ಷದ ವಿದ್ಯುತ್‌ ಬಿಲ್‌ ಮನ್ನಾ

ಮಂಡ್ಯ: ಮಂಡ್ಯ ಜಿಲ್ಲೆಯ ಮೈ ಶುಗರ್‌ ಫ್ಯಾಕ್ಟರಿಯು ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟದೇ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಬಾಕಿಯಿರುವ ವಿದ್ಯುತ್‌ ಬಿಲ್‌ 52.25 ಕೋಟೀ ರೂ ಮನ್ನಾ ಮಾಡುವಂತೆ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಹೀಗಾಗಿ ಕಡತ ಮಂಡನೆಗೆ ಸಿಎಂ ಸೂಚಿಸಿದ್ದಾರೆ.

ಮೈಶುಗರ್‌ ಕಾರ್ಖಾನೆ ವಿದ್ಯುತ್‌ ಬಿಲ್‌ ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ, ಕಡತ ಮಂಡನೆಗೆ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಂಡ್ಯ ಮೈ ಶುಗರ್‌ ಕಾರ್ಖಾನೆ ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟಿರಲಿಲ್ಲ. ಹೀಗಾಗಿ 52.25 ಕೋಟಿ ರೂ ಬಾಕಿ ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪನಿಯು ಕಾರ್ಖಾನೆಗೆ ನೋಟಿಸ್‌ ನೀಡಿತ್ತು.

ರೈತರ ಹಿತದೃಷ್ಟಿಯಿಂದ ಕಾರ್ಖಾನೆ ಉಳಿಸಿಕೊಳ್ಳುವುದು ಅವಶ್ಯವಾಗಿದ್ದು, ವಿದ್ಯುತ್‌ ಬಿಲ್‌ ಮನ್ನಾ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮನವಿ ಮಾಡಿದ್ದಾರೆ.

ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್‌ ಫ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ ಇಡೀ ಏಷ್ಯಾ ಖಂಡದಲ್ಲೇ ಮೊದಲು ಎಂದರೆ, ೧೯೩೨ರಲ್ಲಿ ಈ ಕಾರ್ಖಾನೆಯು ಪ್ರಾರಂಭವಾಯಿತು. ಇದು ಮಂಡ್ಯ ಜಿಲ್ಲೆಯ ಹಾಗೂ ಕರ್ನಾಟಕದ ಹೆಮ್ಮೆಯಾಗಿದೆ. ಆದರೆ ಇದೀಗ ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟದೇ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ.

ಇದರಿಂದ ಪಾರು ಮಾಡುವ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದ್ದು, ಸಂಪುಟ ಸಭೆ ಕರೆದು ಬಾಕಿ ಇರುವ ವಿದ್ಯುತ್‌ ಬಿಲ್‌ ೫೨.೨೫ ಕೋಟಿ ರೂ ಮನ್ನಾ ಮಾಡಬೇಕಿದೆ. ಹಲವು ವರ್ಷಗಳಿಂದ ಹಲವಾರು ಕಾರಣಗಳಿಂದಾಗಿ ಬಂದ್‌ ಆಗಿದ್ದ ಸಕ್ಕರೆ ಕಾರ್ಖಾನೆಯು ಕಳೆದ ವರ್ಷ ಕಾಂಗ್ರೆಸ್‌ ಸರ್ಕಾರದ ಮುತುವರ್ಜಿಯಿಂದ ಪುನರಾರಂಭಗೊಂಡಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಜೈಲಿನಲ್ಲಿ ದುಡ್ಡು ಕೊಟ್ಟರೆ ರಾಜಾತಿಥ್ಯ ಆರೋಪ ; ಕಾರಾಗೃಹದ ಅದೀಕ್ಷಕಿ ವರ್ಗಾವಣೆ

ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್‌ಆರ್ ಮೊಹಮದ್ ಹುಸೇನ್‌ಗೆ ಅನಧಿಕೃತ…

4 hours ago

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

5 hours ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

6 hours ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

6 hours ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

12 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

13 hours ago