ಮಂಡ್ಯ: ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ ಪಕ್ಷಾತೀತವಾಗಿ ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವುದಕ್ಕೆ ವೇದಿಕೆ ಸಿದ್ಧಗೊಂಡಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಜಿಲ್ಲಾಡಳಿತದ ನಿರ್ದೇಶನದಂತೆ ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರು ಎಲ್ಲಾ ಪಕ್ಷಗಳ ರೈತ ಪ್ರತಿನಿಧಿಗಳು ಹಾಗೂ ರೈತ ಮುಖಂಡರ ಸಭೆ ಕರೆದು ಸಾಧಕ-ಬಾಧಕಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಹೊಸ ಕಾರ್ಖಾನೆಯನ್ನು ಎಲ್ಲಿ ಸ್ಥಾಪನೆ ಮಾಡಬೇಕೆಂಬ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳುವ ಮುನ್ನ ಕಾರ್ಖಾನೆಗೆ ಸಿಗಬಹುದಾದ ಕಬ್ಬಿನ ಪ್ರಮಾಣ, ಕಬ್ಬು ಅರೆಯುವ ಸಾಮರ್ಥ್ಯ, ಸಹ ವಿದ್ಯುತ್ ಘಟಕ ಆರಂಭಗೊಳ್ಳುವುದಕ್ಕೆ ಪೂರಕವಾಗಿ ಕಬ್ಬು ಸಿಗಲಿದೆಯೇ ಎಂಬ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ಕುರಿತಂತೆ ತಾಂತ್ರಿಕ ಸಮಿತಿ ಸಿದ್ಧಪಡಿಸುವ ವರದಿಯನ್ನು ಆಧರಿಸಿ ಎಲ್ಲಿ ಸ್ಥಾಪನೆ ಮಾಡಬೇಕು. ಏನೆಲ್ಲಾ ಸೌಲಭ್ಯ ಒಳಗೊಂಡಿರಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. ಹೊಸ ಕಾರ್ಖಾನೆಯನ್ನು ಈಗ ಕಾರ್ಖಾನೆ ಇರುವ ಸ್ಥಳದಲ್ಲೇ ಸ್ಥಾಪಿಸಿದರೆ ಎಷ್ಟು ಹಣ ಖರ್ಚಾಗಲಿದೆ.? ಬೇರೆ ಬೇರೆ ಘಟಕಗಳ ಸ್ಥಾಪನೆಗೆ ಅವಕಾಶ ಸಿಗಲಿದೆಯೇ, ಬೇರೆಡೆ ಸ್ಥಾಪಿಸಿದರೆ ಆಗುವ ಖರ್ಚೆಷ್ಟು. ರೈತರಿಗೆ ಆಗಬಹುದಾದ ಅನುಕೂಲಗಳೇನು ಎನ್ನುವುದನ್ನು ತಾಂತ್ರಿಕ ಸಮಿತಿ ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದೆ.
ಇನ್ನೂ ಕಳೆದ ವರ್ಷ ಮೈಶುಗರ್ ಕಾರ್ಖಾನೆ ಸುಮಾರು 1.90 ಲಕ್ಷ ಟನ್ ಕಬ್ಬು ಅರೆದಿದೆ. ಎರಡನೇ ಮಿಲ್ ಕಾರ್ಯಾಚರಣೆ ಆರಂಭಿಸಿದರೆ ನಿರೀಕ್ಷೆಯಂತೆ ನಿತ್ಯ 5 ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯ ಹೊಂದಲಿದೆ. ಅದಕ್ಕಾಗಿ ಹೊಸ ಕಾರ್ಖಾನೆ ಸ್ಥಾಪನೆಯ ಉದ್ದೇಶವಾದರೂ ಏನೆಂಬುದು ಹಲವರ ಪ್ರಶ್ನೆಯಾಗಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…