ಮಂಡ್ಯ: ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ ಪಕ್ಷಾತೀತವಾಗಿ ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವುದಕ್ಕೆ ವೇದಿಕೆ ಸಿದ್ಧಗೊಂಡಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಜಿಲ್ಲಾಡಳಿತದ ನಿರ್ದೇಶನದಂತೆ ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರು ಎಲ್ಲಾ ಪಕ್ಷಗಳ ರೈತ ಪ್ರತಿನಿಧಿಗಳು ಹಾಗೂ ರೈತ ಮುಖಂಡರ ಸಭೆ ಕರೆದು ಸಾಧಕ-ಬಾಧಕಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಹೊಸ ಕಾರ್ಖಾನೆಯನ್ನು ಎಲ್ಲಿ ಸ್ಥಾಪನೆ ಮಾಡಬೇಕೆಂಬ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳುವ ಮುನ್ನ ಕಾರ್ಖಾನೆಗೆ ಸಿಗಬಹುದಾದ ಕಬ್ಬಿನ ಪ್ರಮಾಣ, ಕಬ್ಬು ಅರೆಯುವ ಸಾಮರ್ಥ್ಯ, ಸಹ ವಿದ್ಯುತ್ ಘಟಕ ಆರಂಭಗೊಳ್ಳುವುದಕ್ಕೆ ಪೂರಕವಾಗಿ ಕಬ್ಬು ಸಿಗಲಿದೆಯೇ ಎಂಬ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ಕುರಿತಂತೆ ತಾಂತ್ರಿಕ ಸಮಿತಿ ಸಿದ್ಧಪಡಿಸುವ ವರದಿಯನ್ನು ಆಧರಿಸಿ ಎಲ್ಲಿ ಸ್ಥಾಪನೆ ಮಾಡಬೇಕು. ಏನೆಲ್ಲಾ ಸೌಲಭ್ಯ ಒಳಗೊಂಡಿರಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. ಹೊಸ ಕಾರ್ಖಾನೆಯನ್ನು ಈಗ ಕಾರ್ಖಾನೆ ಇರುವ ಸ್ಥಳದಲ್ಲೇ ಸ್ಥಾಪಿಸಿದರೆ ಎಷ್ಟು ಹಣ ಖರ್ಚಾಗಲಿದೆ.? ಬೇರೆ ಬೇರೆ ಘಟಕಗಳ ಸ್ಥಾಪನೆಗೆ ಅವಕಾಶ ಸಿಗಲಿದೆಯೇ, ಬೇರೆಡೆ ಸ್ಥಾಪಿಸಿದರೆ ಆಗುವ ಖರ್ಚೆಷ್ಟು. ರೈತರಿಗೆ ಆಗಬಹುದಾದ ಅನುಕೂಲಗಳೇನು ಎನ್ನುವುದನ್ನು ತಾಂತ್ರಿಕ ಸಮಿತಿ ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದೆ.
ಇನ್ನೂ ಕಳೆದ ವರ್ಷ ಮೈಶುಗರ್ ಕಾರ್ಖಾನೆ ಸುಮಾರು 1.90 ಲಕ್ಷ ಟನ್ ಕಬ್ಬು ಅರೆದಿದೆ. ಎರಡನೇ ಮಿಲ್ ಕಾರ್ಯಾಚರಣೆ ಆರಂಭಿಸಿದರೆ ನಿರೀಕ್ಷೆಯಂತೆ ನಿತ್ಯ 5 ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯ ಹೊಂದಲಿದೆ. ಅದಕ್ಕಾಗಿ ಹೊಸ ಕಾರ್ಖಾನೆ ಸ್ಥಾಪನೆಯ ಉದ್ದೇಶವಾದರೂ ಏನೆಂಬುದು ಹಲವರ ಪ್ರಶ್ನೆಯಾಗಿದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…