ಮಂಡ್ಯ: ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ ಪಕ್ಷಾತೀತವಾಗಿ ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವುದಕ್ಕೆ ವೇದಿಕೆ ಸಿದ್ಧಗೊಂಡಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಜಿಲ್ಲಾಡಳಿತದ ನಿರ್ದೇಶನದಂತೆ ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರು ಎಲ್ಲಾ ಪಕ್ಷಗಳ ರೈತ ಪ್ರತಿನಿಧಿಗಳು ಹಾಗೂ ರೈತ ಮುಖಂಡರ ಸಭೆ ಕರೆದು ಸಾಧಕ-ಬಾಧಕಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಹೊಸ ಕಾರ್ಖಾನೆಯನ್ನು ಎಲ್ಲಿ ಸ್ಥಾಪನೆ ಮಾಡಬೇಕೆಂಬ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳುವ ಮುನ್ನ ಕಾರ್ಖಾನೆಗೆ ಸಿಗಬಹುದಾದ ಕಬ್ಬಿನ ಪ್ರಮಾಣ, ಕಬ್ಬು ಅರೆಯುವ ಸಾಮರ್ಥ್ಯ, ಸಹ ವಿದ್ಯುತ್ ಘಟಕ ಆರಂಭಗೊಳ್ಳುವುದಕ್ಕೆ ಪೂರಕವಾಗಿ ಕಬ್ಬು ಸಿಗಲಿದೆಯೇ ಎಂಬ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ಕುರಿತಂತೆ ತಾಂತ್ರಿಕ ಸಮಿತಿ ಸಿದ್ಧಪಡಿಸುವ ವರದಿಯನ್ನು ಆಧರಿಸಿ ಎಲ್ಲಿ ಸ್ಥಾಪನೆ ಮಾಡಬೇಕು. ಏನೆಲ್ಲಾ ಸೌಲಭ್ಯ ಒಳಗೊಂಡಿರಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. ಹೊಸ ಕಾರ್ಖಾನೆಯನ್ನು ಈಗ ಕಾರ್ಖಾನೆ ಇರುವ ಸ್ಥಳದಲ್ಲೇ ಸ್ಥಾಪಿಸಿದರೆ ಎಷ್ಟು ಹಣ ಖರ್ಚಾಗಲಿದೆ.? ಬೇರೆ ಬೇರೆ ಘಟಕಗಳ ಸ್ಥಾಪನೆಗೆ ಅವಕಾಶ ಸಿಗಲಿದೆಯೇ, ಬೇರೆಡೆ ಸ್ಥಾಪಿಸಿದರೆ ಆಗುವ ಖರ್ಚೆಷ್ಟು. ರೈತರಿಗೆ ಆಗಬಹುದಾದ ಅನುಕೂಲಗಳೇನು ಎನ್ನುವುದನ್ನು ತಾಂತ್ರಿಕ ಸಮಿತಿ ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದೆ.
ಇನ್ನೂ ಕಳೆದ ವರ್ಷ ಮೈಶುಗರ್ ಕಾರ್ಖಾನೆ ಸುಮಾರು 1.90 ಲಕ್ಷ ಟನ್ ಕಬ್ಬು ಅರೆದಿದೆ. ಎರಡನೇ ಮಿಲ್ ಕಾರ್ಯಾಚರಣೆ ಆರಂಭಿಸಿದರೆ ನಿರೀಕ್ಷೆಯಂತೆ ನಿತ್ಯ 5 ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯ ಹೊಂದಲಿದೆ. ಅದಕ್ಕಾಗಿ ಹೊಸ ಕಾರ್ಖಾನೆ ಸ್ಥಾಪನೆಯ ಉದ್ದೇಶವಾದರೂ ಏನೆಂಬುದು ಹಲವರ ಪ್ರಶ್ನೆಯಾಗಿದೆ.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…