ಮಂಡ್ಯ

ಮಂಡ್ಯ | ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆಯಿಲ್ಲ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಇಲ್ಲ. ರೈತರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು.

ಶುಕ್ರವಾರ ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 5000 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನಿದ್ದು, ಇನ್ನು‌ ಕೆಲವೇ ದಿನದಲ್ಲಿ 1800 ಮೆ.ಟನ್ ಯೂರಿಯಾ ಬರಲಿದೆ. ಜಿಲ್ಲೆಯಲ್ಲಿ ಕೃಷಿ ಸಂಬಂಧಿಸಿದ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ರಸಗೊಬ್ಬರ ಮಾರಾಟಗಾರರು ತಮ್ಮಲ್ಲಿರುವ ಭೌತಿಕ‌ ಹಾಗೂ ಆನ್ ಲೈನ್ ದಾಸ್ತಾನು ಒಂದೆ ರೀತಿ ಇರುವಂತೆ ನೋಡಿಕೊಳ್ಳಬೇಕು. ಮಾರಾಟವಾದ ತಕ್ಷಣ ನಮೂದಿಸಿದರೆ ಸರಿಯಾದ ಲೆಕ್ಕ ಸಿಗುತ್ತದೆ ಎಂದರು. ರಸಗೊಬ್ಬರದ ಕೃತಕ ಕೊರತೆ ಉಂಟಾಗುವ ರೀತಿ ಸನ್ನಿವೇಶ ಸೃಷ್ಠಿಸುವುದು, ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟಗಾರರು ತಮ್ಮ ಬಳಿ ಇರುವ ರಸಗೊಬ್ಬರ ಹಾಗೂ ದಾಸ್ತಾನು ವಿವರದ ಫಲಕವನ್ನು ಅನಾವರಣಗೊಳಿಸಬೇಕು. ರೈತರಿಗೆ ನ್ಯನೋ ಯೂರಿಯಾದ ಉಪಯುಕ್ತತೆ ಹಾಗೂ ಬಳಕೆಯ ಬಗ್ಗೆ ಕೃಷಿ ಅಧಿಕಾರಿಗಳು ಜಗೃತಿ ಮೂಡಿಸಬೇಕು ಎಂದರು. ತಹಶೀಲ್ದಾರ್ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ನಿಯಮಿತವಾಗಿ ರಸಗೊಬ್ಬರ ಮಾರಾಟ ಅಂಗಡಿಗಳಿಗೆ ಹಾಗೂ ರೈತ ಚಟುವಟಿಕೆ ಇರುವ ಸ್ಥಳಗಳಿಗೆ ಭೇಟಿ ನೀಡಿ ಕೆಲಸಗಳು ನಿಯಮಾನುಸಾರ ನಡೆಯುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ ಎಂದರು.

ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡುವುದನ್ನು ತಡೆಗಟ್ಟಲು ಉಪವಿಭಾಗಾಧಿಕಾರಿಗಳ ಮುಂದಾಳತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ತಂಡದಲ್ಲಿ ಕೈಗಾರಿಕಾ ಇಲಾಖೆ,ವಾಣಿಜ್ಯ ತೆರಿಗೆ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಸಹ ಕಾರ್ಯನಿರ್ವಹಿಸಲಿದ್ದಾರೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಅಕ್ರಮವಾಗಿ ಯುರಿಯಾ ದಾಸ್ತಾನು ಪ್ರಕರಣಗಳಿದ್ದಲ್ಲಿ ಕೃಷಿ ಅಧಿಕಾರಿಗಳು ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಹಾಯ ಪಡೆದು ದಾಳಿ ನಡೆಸಿ ಎಂದರು. ರಸಗೊಬ್ಬರ ಮಾರಾಟ ಸಂದರ್ಭದಲ್ಲಿ ಕೆಲವು ಭಾಗದ ಅಂಗಡಿಗಳಲ್ಲಿ ಹೆಚ್ಚು ರೈತ ಗ್ರಾಹಕರಿದ್ದು, ನೂಕು ನುಗ್ಗಲು ಉಂಟಾಗುವ ಸಾಧ್ಯತೆ ಇರುತ್ತದೆ. ಮೊದಲೇ ಮಾಹಿತಿ ನೀಡಿ ಪೊಲೀಸ್ ಪೇದೆಗಳನ್ನು ನಿಯೋಜಿಸಿಕೊಂಡು ಯಾವುದೇ ಗೊಂದಲ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದರು. ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್ ಮಾಹೆಯಲ್ಲಿ ಯೂರಿಯಾ ಬೇಡಿಕೆ ಹೆಚ್ಚಿರುತ್ತದೆ. ಅಭಾವ ಉಂಟಾಗಬಹುದು ಎಂದು ಹೆಚ್ಚು ಖರೀದಿಸುವುದು, ಬೇರೆ ಜಿಲ್ಲೆಯವರು ಖರೀದಿಸುವ ಸಾಧ್ಯತೆ ಇರುತ್ತದೆ. ಇವುಗಳ ಬಗ್ಗೆ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು ಎಂದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ದಿನೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು ‌

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

10 mins ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

14 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

15 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

15 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

16 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

17 hours ago