ಮಂಡ್ಯ

ಮಂಡ್ಯ: ಕೆರೆಗಳಿಗೆ ಶೀಘ್ರ ನೀರು ತುಂಬಿಸಲು ಸೂಚನೆ

ಮಂಡ್ಯ: ಜಿಲ್ಲೆಯಲ್ಲಿ 968 ಕೆರೆಗಳಿದ್ದು, 448 ಕೆರೆಗಳು ಮಾತ್ರ ಶೇ. 100% ರಷ್ಟು ತುಂಬಿದೆ. ಎಲ್ಲಾ ಕೆರೆಗಳು 15 ದಿನಗಳಲ್ಲಿ ತುಂಬಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಭು ಕುಮಾರ್  ಹೇಳಿದರು.

ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಕೆಲವು ಕೆರೆಗಳು ಮಳೆ ಆಶ್ರಿತವಾಗಿರುತ್ತದೆ. ಈ ಬಾರಿ ಉತ್ತಮ ಮಳೆಯಾಗಿದ್ದರೂ ಕೆರೆ ತುಂಬಿಲ್ಲ ಎಂದರೆ ಕೆರೆಯ ನೀರು ಹರಿದು ಬರುವ ಸ್ಥಳಗಳು ಒತ್ತುವರಿಯಾಗಿವೆ ಎಂದರ್ಥ. ಕೆರೆಯ ಸ್ಥಳ ಪರಿಶೀಲನೆ ನಡೆಸಿದರೆ, ಅಲ್ಲಿಯ ರೈತರು ಅದಕ್ಕೆ ಸರಿಯಾದ ಕಾರಣ ನೀಡುತ್ತಾರೆ.  ಈ ಬಗ್ಗೆ ತಹಶೀಲ್ದಾರ್ ಗಳು ಕೆರೆ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೆರೆಗಳು ಜನರ ಬದುಕಿನ ಆಧಾರ, ಒಂದು ಕೆರೆ ತುಂಬಿದರೆ ಎರಡು ಅಥವಾ ಮೂರು ಹಳ್ಳಿಗೆ ನೀರು ಒದಗಿಸಬಹುದು‌. ಕೆರೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ವಿಪತ್ತು ನಿರ್ವಹಣಾ ಅನುದಾನದಲ್ಲಿ 2 ಲಕ್ಷ ರೂ ಹಣ ಬಳಕೆ ಮಾಡಿಕೊಳ್ಳಬಹುದು ಎಂದರು.

ಬಡವರ ಮನೆ ಹಾನಿಯಾದಾಗ ಸರ್ಕಾರ ನೀಡುವ ಪರಿಹಾರ ಹಣವನ್ನು 48 ಗಂಟೆಯೊಳಗೆ ಪರಿಶೀಲನೆ ನಡೆಸಿ ಒದಗಿಸುವುದು ತಹಶೀಲ್ದಾರ್ ಜವಾಬ್ದಾರಿಯಾಗಿರುತ್ತದೆ. ಅಕ್ಟೋಬರ್ ಮಾಹೆಯಲ್ಲಿ ಮಳೆಯಿಂದ ಮನೆ ಹಾನಿಯಾಗಿರುವ 84 ಮನೆಗಳಿಗೆ ಪರಿಹಾರ ಪಾವತಿಯಾಗಿಲ್ಲ , ಎರಡು ದಿನದಳೊಳಗೆ ಪರಿಹಾರ ಒದಗಿಸಿ ವರದಿ ನೀಡುವಂತೆ ಸೂಚನೆ ನೀಡಿದರು.

ರೈತರಿಗೆ ರಸಗೊಬ್ಬರ, ಮಳೆ ಹಾನಿ, ಬರ ಪರಿಹಾರ ಸೇರಿದಂತೆ ವಿವಿಧ ರೀತಿಯ ಕೃಷಿ ಹಾಗೂ ತೋಟಗಾರಿಕೆ ಸೌಲಭ್ಯ ಒದಗಿಸಲು ಸಹಕಾರಿಯಾಗಿದ್ದು, ಬೆಳೆ ಸಮೀಕ್ಷೆಯನ್ನು ಅಂಗೈಯಲ್ಲಿ ಮಾಹಿತಿ ಎನ್ನಬಹುದು. ಇದು ಶೇ 100 ರಷ್ಟು ಪೂರ್ಣಗೊಳ್ಳಬೇಕು ಎಂದರು.

ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆಗಳು ತಲುಪಬೇಕು. ಬ್ಯಾಂಕ್ ಖಾತೆ ಸಂಖ್ಯೆಗೆ ಆಧಾರ್ ಜೋಡಣೆ ಮಾಡದೇ ಇರುವುದು ಹಣ ಪಾವತಿ ತಲುಪದೆ ಇರುವುದು ಮುಖ್ಯ ಕಾರಣವಾಗಿರುತ್ತದೆ. ಇದನ್ನು ಫಲಾನುಭವಿಗಳಿಗೆ ಮಾಹಿತಿ ನೀಡಿ ಸರಿಪಡಿಸಿ ಇದರಿಂದ ಬಹಳಷ್ಟು ಸಮಸ್ಯೆ ಪರಿಹಾರವಾಗುತ್ತದೆ ಎಂದರು.

ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿ ಅನುತ್ತೀರ್ಣರಾಗಬಾರದು. ತಾಲ್ಲೂಕುವಾರು ಪರಿಶೀಲನೆ ನಡೆಸಿ, ವಿಶೇಷ ತರಗತಿ ನಡೆಸಿ, ಪ್ರತಿ ಶಾಲೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಎಂದು ತಿಳಿಸಿದರು.

ಅಧಿಕಾರಿಗಳು ತಮ್ಮ ಇಲಾಖೆ ನೀಡುವ ನಿರ್ದೇಶನ ಹಾಗೂ ಸೂಚನೆಯಂತೆ ಕಾರ್ಯ ನಿರ್ವಹಿಸಿ. ಇಲಾಖೆಗಳಲ್ಲಿ ಅವಧಿ ಮೀರಿ ಯಾವುದೇ ಪ್ರಕರಣಗಳು ಬಾಕಿ ಉಳಿಯದಂತೆ ಪಾರದರ್ಶಕವಾಗಿ ಕೆಲಸ ಮಾಡಿ ಸೂಚಿಸಿದರು.

ಜಿಲ್ಲೆಯಲ್ಲಿನ ಒಟ್ಟು 969 ಕೆರೆಗಳ ಪೈಕಿ 448 ಕೆರೆಗಳು ಶೇ. 100% ರಷ್ಟು ಸಂಪೂರ್ಣವಾಗಿ ತುಂಬಿದ್ದು, 132 ಕೆರೆಗಳು ಶೇ. 75% ರಿಂದ 100% ರಷ್ಟು ತುಂಬಿವೆ. 123 ಕೆರೆಗಳು ಶೇ. 50% ನಿಂದ 75% ರಷ್ಟು ತುಂಬಿವೆ. 122 ಕೆರೆಗಳು ಶೇ. 25% ನಿಂದ 50% ರಷ್ಟು ಹಾಗೂ 143 ಕೆರೆಗಳಲ್ಲಿ ಶೇ. 25% ಕ್ಕಿಂತ ಕಡಿಮೆ ನೀರು ಸಂಗ್ರಹವಾಗಿದೆ.  ಜೊತೆಗೆ ವಿಪತ್ತು ನಿರ್ವಹಣೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳು, ಬಾಲ್ಯ ವಿವಾಹ ಪ್ರಕರಣಗಳು ಕ್ರಮೇಣ ಕಡಿಮೆಯಾಗುತ್ತಿದ್ದು, ಇದಕ್ಕೆ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಲ ಜೀವನ್ ಮಿಷನ್, ಶುದ್ಧ ಕುಡಿಯುವ ನೀರಿನ ಘಟಕ, ಬೂದು ನೀರು, ತ್ಯಾಜ್ಯ ನಿರ್ವಾಹಣೆ ವಿಷಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 233 ಗ್ರಾಮ ಪಂಚಾಯಿತಿಗಳಿದ್ದು, 1306 ಗ್ರಾಮಗಳಿವೆ. ಜಲಜೀವನ್ ಮಿಷನ್ ಅಡಿಯಲ್ಲಿ ಒಟ್ಟು 3,61,862 ಕುಟುಂಬಗಳಿಗೆ ನಳ ಸಂಪರ್ಕ ಕಲ್ಪಿಸಲಾಗಿದ್ದು, ಬಾಕಿ 39,263 ಕುಟುಂಬಗಳಿಗೆ ನಳ ಸಂಪರ್ಕ ಕಲ್ಪಿಸಬೇಕಿದೆ ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಗಂಗಾಧರ ಸ್ವಾಮಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

5 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago