ಮಂಡ್ಯ

ಮಂಡ್ಯ| ಹೊರ ಗುತ್ತಿಗೆ ನೌಕರರ ವೇತನವನ್ನು 5 ನೇ ತಾರೀಖಿನೊಳಗೆ ಪಾವತಿ ಮಾಡಿ: ಡಾ ಕುಮಾರ

ಮಂಡ್ಯ: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳು ಹಾಗೂ ಹಾಸ್ಟೆಲ್ ಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪ್ರತಿ ತಿಂಗಳು 5 ನೇ ತಾರೀಖಿನೊಳಗೆ ಸಂಬಳ ಪಾವತಿಯಾಗಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಹಾಸ್ಟೆಲ್ ಹಾಗೂ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಕುಂದು ಕೊರತೆ ಸಭೆ ನಡೆಸಿ ಮಾತನಾಡಿದರು.

ಹೊರಗುತ್ತಿಗೆ ಟೆಂಡರ್ ಪಡೆದಿರುವ ಏಜೆನ್ಸಿಗಳು ಇಲಾಖೆಗಳಿಂದ ಬಿಲ್ ಪಾವತಿಯಾದ ನಂತರ ಸಂಬಳ ಪಾವತಿ ಮಾಡುವುದಲ್ಲ, 5 ನೇ ತಾರೀಖು ಅವರಿಗೆ ವೇತನ ಪಾವತಿ ಮಾಡುವುದು. ಟೆಂಡರ್ ನಲ್ಲೇ ಈ ಷರತ್ತು ಇರುತ್ತದೆ ಎಂದರು.

ಇಲಾಖೆಗಳು ಏಜೆನ್ಸಿಗಳಿಗೆ ಬಿಲ್ ಪಾವತಿ ಮಾಡುವ ಮೊದಲು ಸಿಬ್ಬಂದಿಗಳಿಗೆ ಇ.ಎಸ್.ಐ, ಪಿ.ಎಫ್ ಪಾವತಿ ಮಾಡಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು ಹಾಗೂ ದಾಖಲಾತಿಗಳನ್ನು ಪಡೆದುಕೊಳ್ಳಬೇಕು ಎಂದರು.

ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಏಜೆನ್ಸಿ ಅವರು ವೇತನ ಸಂದಾಯ ರಶೀದಿ ನೀಡಬೇಕು. ವಸತಿ ನಿಲಯಗಳ ಮೇಲ್ವಿಚಾರಕರು ತಮ್ಮ ವ್ಯಾಪ್ತಿಗೆ ಬರುವ ಸಿಬ್ಬಂದಿಗಳಿಗೆ ವೇತನ ಪಾವತಿಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳಿ ಇದರಿಂದ ಬಹಳಷ್ಟು ಸಮಸ್ಯೆಗಳು ಪರಿಹಾರವಾಗುತ್ತದೆ ಎಂದರು.

ವಸತಿನಿಲಯಗಳಲ್ಲಿ ಅಡುಗೆ ಸಿಬ್ಬಂದಿಗಳಿಗೆ ಅಡುಗೆ ತಯಾರು ಮಾಡುವ ಪರಿಕರಗಳಾದ ಚಪಾತಿ ಒತ್ತುವ ಯಂತ್ರ, ರುಬ್ಬುವ ಯಂತ್ರ ಇತ್ಯದಿಗಳನ್ನು ಸರ್ಕರ ನಿಗದಿಪಡಿಸಿರುವ ನಿಯಮದಂತರ ಒದಗಿಸಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿ. ವಿದ್ಯಾರ್ಥಿಗಳು ಸೇವಿಸುವ ಪರಿಮಾಣದಲ್ಲಿ ಶುಚಿ, ರುಚಿ ಹಾಗೂ ಬಿಸಿಯಾದ ಆಹಾರ ನೀಡಿ. ಆಹಾರವನ್ನು ವ್ಯರ್ಥ ಮಾಡಬೇಡಿ ಎಂದರು.

ಹೊರಗುತ್ತಿಗೆ ಸೇವೆ ನೀಡುವ ಏಜೆನ್ಸಿಗಳು ನಿಯಮದಂತೆ ಕಾರ್ಯನಿರ್ವಹಿಸದಿದ್ದಲ್ಲಿ ಅವರಿಗೆ ನೋಟೀಸ್ ನೀಡಿ, ಅಮಾನತ್ತು ಮಾಡಿ ಕಪ್ಪುಪಟ್ಟಿಗೆ ಸೇರಿಸಿ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ ಸಿದ್ದಲಿಂಗೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣ ಕುಮಾರ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಧುಶ್ರೀ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

5 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

5 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

5 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago