ಮಂಡ್ಯ

ಮಂಡ್ಯ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ, ಕಾಂಗ್ರೆಸ್‌ ಖಂಡನೆ

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ಲಾಕ್ ಮೇಲರ್ ಡಿ.ಜೆ.ಅಬ್ರಹಾಂ ಅವರು ನೀಡಿರುವ ಸುಳ್ಳು ದೂರಿನ ಮೇರೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡನೀಯ ಎಂದು ಕಿಡಿಕಾರಿದರು.

ಯಾವ ವ್ಯಕ್ತಿ ದೂರು ನೀಡಿದ್ದಾರೆ. ಆ ವ್ಯಕ್ತಿಯ ಹಿನ್ನೆಲೆ ಏನು ಎನ್ನುವುದನ್ನು ಗಮನಿಸದೆ ,ಕಾನೂನಿನಲ್ಲಿ ಅವಕಾಶ ಇದೆಯೋ ಇಲ್ಲವೋ ತಿಳಿಯದೆ ಬಿಜೆಪಿಯ ಕುಮ್ಮಕಿನಿಂದ ಅನುಮತಿ ನೀಡಿರುವುದು ಅಕ್ಷಮ್ಯ ಎಂದರು.

ಬಿಜೆಪಿ ರಾಜಭವನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ರಾಜಭವನ ಈಗ ರಾಜಕೀಯ ಭವನವಾಗಿದ್ದು ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ ಎಂದು ದೂರಿದರು.

2007 ರಲ್ಲಿ ಕುಮಾರಸ್ವಾಮಿ ಅವರು ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ. ಲೋಕಾಯುಕ್ತರು ಈ ಬಗ್ಗೆ ತನಿಖೆ ನಡೆಸಿ ಆರೋಪ ಸಾಬೀತಾಗಿದೆ. ಆದರೆ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ. ಹಾಗೆಯೇ ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ ,ಮುರುಗೇಶ್ ನಿರಾಣಿ ,ಮೈ ಶುಗರ್ ಮಾಜಿ ಅಧ್ಯಕ್ಷ ನಾಗರಾಜಪ್ಪ ಅವರು ಮಾಡಿರುವ ಆರೋಪಗಳು ಸಾಬೀತಾಗಿದ್ದರೂ ಪ್ರಾಸಿಕ್ಯೂಷನ್ ಗೆ ರಾಜಪಾಲರು ಅನುಮತಿ ನೀಡಿಲ್ಲ.ಇದರ ಹಿಂದೆ ದುರುದ್ದೇಶ ಅಡಗಿದೆ ಎಂದು ದೂರಿದರು.

ಕೇವಲ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಗ್ಗೆ ಪ್ರಾಸಿಕ್ಯೂಶಷನ್‌ಗೆ  ಅನುಮತಿ ನೀಡಲಾಗಿದೆ .ಇದರ ಹಿಂದೆ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಿದೆ. ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದ್ದಾರೆ ಎಂದು ಕಿಡಿ ಕಾರಿದರಲ್ಲವೇ ಈ ಬಗ್ಗೆ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ಸಿಎಂ ದ್ಯಾವಪ್ಪ ,ಕೆ ಎಲ್ ನಾಗೇಂದ್ರ, ರಾಜಣ್ಣ ,ಉಮ್ಮಡಹಳ್ಳಿ ನಾಗೇಶ್ ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

50 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

54 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

59 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

1 hour ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

1 hour ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago