ಮಂಡ್ಯ

ಮಂಡ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರು ಮಹಿಳೆಯರ ರಕ್ಷಣೆ

ಮಂಡ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಮಹಿಳೆಯರನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಲಾಡ್ಜ್‌ವೊಂದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿತ್ತು. ಅಮಾಯಕ ಹೆಣ್ಣು ಮಕ್ಕಳನ್ನು ಹಣದ ಆಮಿಷವೊಡ್ದಿ ಕರೆತಂದು ವೇಶ್ಯಾವಾಟಿಕೆ ದಂಧೆಯನ್ನು ನಡೆಸಲಾಗುತ್ತಿತ್ತು. ಈ ವೇಶ್ಯಾವಾಟಿಕೆ ದಂಧೆಯಲ್ಲಿ ಒಬ್ಬ ಮಹಿಳಾ ದಂಧೆಕೋರಳು ಸಹ ಇರುವುದಾಗಿ ತಿಳಿದುಬಂದಿದೆ.

ಇಲ್ಲಿ ದಂಧೆ ನಡೆಯುತ್ತಿದ್ದ ವಿಚಾರವನ್ನು ಅಲ್ಲಿನ ಸ್ಥಳೀಯರು ಒಡನಾಡಿಗೆ ಮಾಹಿತಿ ತಿಳಿಸಿದ್ದರು. ಈ ದಂಧೆಕೋರರು ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಸೇರಿದಂತೆ ಇನ್ನಿತರ ಮೂಲದಿಂದಲೂ ಹೆಣ್ಣು ಮಕ್ಕಳನ್ನು ಕರೆಯಿಸಿ ದೊಡ್ಡ ಪ್ರಮಾಣದಲ್ಲೇ ದಂಧೆ ನಡೆಸುತ್ತಿದ್ದರು, ಪ್ರತಿದಿನ 30ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗಿರಾಕಿಗಳು ಈ ಲಾಡ್ಜ್‌ಗೆ ಹೋಗಿ ಬರುತ್ತಿದ್ದರು.

ದಂಧೆಯನ್ನು ನಡೆಸುತ್ತಿದ್ದ ಎಲ್ಲಾ ಮಾಹಿತಿಯನ್ನು ಪಡೆದ ಒಡನಾಡಿ ಸಂಸ್ಥೆಯು ತಕ್ಷಣ ಅಲ್ಲಿನ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದೆ.

ಮಾಹಿತಿ ಸ್ವೀಕರಿಸಿದ ಪೊಲೀಸ್ ನೀರಿಕ್ಷಕರು ತಂಡವೊಂದನ್ನು ರಚಿಸಿದ್ದು, ಒಡನಾಡಿಯು ಪೊಲೀಸ್ ಸಹಯೋಗದಲ್ಲಿ ವೇಶ್ಯಾವಾಟಿಕೆ ಮೇಲೆ ದಾಳಿ ನಡೆಸಿದೆ. ಈ ದಾಳಿಯ ವೇಳೆ ಇಬ್ಬರು ಅಮಾಯಕ ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

2 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

3 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

3 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

3 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

4 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

4 hours ago