Mandya: Police raid prostitution ring: Two women rescued
ಮಂಡ್ಯ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರು ಮಹಿಳೆಯರನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಲಾಡ್ಜ್ವೊಂದರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿತ್ತು. ಅಮಾಯಕ ಹೆಣ್ಣು ಮಕ್ಕಳನ್ನು ಹಣದ ಆಮಿಷವೊಡ್ದಿ ಕರೆತಂದು ವೇಶ್ಯಾವಾಟಿಕೆ ದಂಧೆಯನ್ನು ನಡೆಸಲಾಗುತ್ತಿತ್ತು. ಈ ವೇಶ್ಯಾವಾಟಿಕೆ ದಂಧೆಯಲ್ಲಿ ಒಬ್ಬ ಮಹಿಳಾ ದಂಧೆಕೋರಳು ಸಹ ಇರುವುದಾಗಿ ತಿಳಿದುಬಂದಿದೆ.
ಇಲ್ಲಿ ದಂಧೆ ನಡೆಯುತ್ತಿದ್ದ ವಿಚಾರವನ್ನು ಅಲ್ಲಿನ ಸ್ಥಳೀಯರು ಒಡನಾಡಿಗೆ ಮಾಹಿತಿ ತಿಳಿಸಿದ್ದರು. ಈ ದಂಧೆಕೋರರು ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಸೇರಿದಂತೆ ಇನ್ನಿತರ ಮೂಲದಿಂದಲೂ ಹೆಣ್ಣು ಮಕ್ಕಳನ್ನು ಕರೆಯಿಸಿ ದೊಡ್ಡ ಪ್ರಮಾಣದಲ್ಲೇ ದಂಧೆ ನಡೆಸುತ್ತಿದ್ದರು, ಪ್ರತಿದಿನ 30ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗಿರಾಕಿಗಳು ಈ ಲಾಡ್ಜ್ಗೆ ಹೋಗಿ ಬರುತ್ತಿದ್ದರು.
ದಂಧೆಯನ್ನು ನಡೆಸುತ್ತಿದ್ದ ಎಲ್ಲಾ ಮಾಹಿತಿಯನ್ನು ಪಡೆದ ಒಡನಾಡಿ ಸಂಸ್ಥೆಯು ತಕ್ಷಣ ಅಲ್ಲಿನ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದೆ.
ಮಾಹಿತಿ ಸ್ವೀಕರಿಸಿದ ಪೊಲೀಸ್ ನೀರಿಕ್ಷಕರು ತಂಡವೊಂದನ್ನು ರಚಿಸಿದ್ದು, ಒಡನಾಡಿಯು ಪೊಲೀಸ್ ಸಹಯೋಗದಲ್ಲಿ ವೇಶ್ಯಾವಾಟಿಕೆ ಮೇಲೆ ದಾಳಿ ನಡೆಸಿದೆ. ಈ ದಾಳಿಯ ವೇಳೆ ಇಬ್ಬರು ಅಮಾಯಕ ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…