ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ ಗಾಂಧಿನಗರದಲ್ಲಿ ಜರುಗಿದೆ.
ನವೀದ್ ಎಂಬಾತನೇ ಸಿಕ್ಕಿಬಿದ್ದಿರುವ ಕಳ್ಳ. ಕಳ್ಳತನ ಆರೋಪದಡಿ ಈತನನ್ನು ವಿಚಾರಣೆಗಾಗಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತಂದಿದ್ದ ವೇಳೆ ಬೇಡಿ ಸಮೇತ ಪೊಲೀಸರ ಕಣ್ತಪ್ಪಿಸಿ ಠಾಣೆಯಿಂದ ತಪ್ಪಿಸಿಕೊಂಡಿದ್ದನು. ಬೇಡಿ ಹಾಕಿಕೊಂಡು ಸಾರ್ವಜನಿಕವಾಗಿ ಓಡಾಡುತ್ತಾ ಜನರಲ್ಲಿ ಆತಂಕ ಮೂಡಿಸಿ ದ್ದನು.
ಠಾಣೆಯಿಂದ ತಪ್ಪಿಸಿಕೊಂಡು ಬಂದ ನವೀದ್ ಗಾಂಧಿನಗರದಲ್ಲಿರುವ ಮನೆ ಯೊಂದರ ಕಾಂಪೌಂಡ್ ಹಾರಿದ್ದಾನೆ. ಈ ವೇಳೆ ಅನುಮಾನಗೊಂಡು ಆತ ನನ್ನು ಹಿಂಬಾಲಿಸಿದ್ದ ಸ್ಥಳೀಯರು ಆತ ನನ್ನು ಅಟ್ಟಿಸಿಕೊಂಡು ಹೋಗಿ ಹಿಡಿದಿ ದ್ದಾರೆ. ಬಳಿಕ ವಿಚಾರಿಸಿದಾಗ ಕಳ್ಳತನ ಪ್ರಕ ರಣವೊಂದರಲ್ಲಿ ಸಿಕ್ಕಿಬಿದ್ದು ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿ ದ್ದಾಗಿ ಹೇಳಿದ್ದಾನೆ. ನಂತರ ಪೊಲೀಸ ರಿಗೆ ಮಾಹಿತಿ ನೀಡಿ, ನವೀದ್ನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದರು.
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…