ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್ ಏಜೆಂಟ್ ಗಳ ವಿವರವನ್ನು ಚುನಾವಣಾ ಶಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕುಮಾರ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷದ ಮುಖಂಡರ ಸಭೆಯನ್ನು ಇಂದು ನಡೆಸಲಾಗುತ್ತಿದೆ ಎಂದರು.
ಚುನಾವಣೆ ನಡೆಸುವ ನಿಯಮಗಳು ಹಾಗೂ ಮತದಾರರ ನೋಂದಣಿ, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಇತರೆ ಚುನಾವಣಾ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳಿಂದ ಯಾವುದಾದರೂ ಸಲಹೆಗಳಿದ್ದಲ್ಲಿ ತಿಳಿಸಿ, ಜೊತೆಗೆ ಮತಗಟ್ಟೆ ಮಟ್ಟದ ಏಜೆಂಟರ ನೇಮಕ ಮಾಡಿ ಮಾಹಿತಿ ನೀಡಲು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಬಿ.ಸಿ. ಶಿವಾನಂದಮೂರ್ತಿ, ಮಂಡ್ಯ ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ,
ಚುನಾವಣಾ ತಹಸೀಲ್ದಾರ್ ರವಿಶಂಕರ್,ಚಿ.ಜಿ. ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಡಿ.ರಮೇಶ್, ಸುಂಡಹಳ್ಳಿ ಮಂಜುನಾಥ್, ದಿನೇಶ್, ಬೂದನೂರು ಬೊಮ್ಮಯ್ಯ, ರಮೇಶ್ ಹಾಜರಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…