ಮಂಡ್ಯ: ಜಿಲ್ಲೆಯಲ್ಲಿ ಜುಲೈ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ತಿಳಿಸಿದರು.
ಅವರು ಶನಿವಾರ(ಜು.6) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.
ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠೆಕ್ಗಳನ್ನು ನಡೆಸಿದ್ದು, ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ಮೋಟಾರು ವಾಹನಗಳ ಪ್ರಕರಣಗಳು, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಜನತಾ ನ್ಯಾಯಾಲಯಗಳನ್ನು ಮಾಡಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೋಕ ಅದಾಲತ್ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಜೊತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ ವ್ಯಾಜ್ಯಪೂರ್ವ ಪ್ರಕರಣಗಳು (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು) ಇಂತಹ ಪ್ರಕರಣಗಳಿಗೆ ಉಭಯ ಪಕ್ಷಗಾರರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠೆಕ್ ನಡೆಸಿ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿಮಾಡಿಕೊಳ್ಳಬಹುದಾಗಿರುತ್ತದೆ ಎಂದು ಹೇಳಿದರು.
ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25 ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿರುವ ಶೇ. 5% ರಷ್ಟು ರಿಯಾಯಿತಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ತಪ್ಪದೇ ತಮ್ಮ ಆಸ್ತಿ ತೆರಿಗೆ ಪಾವತಿಸಿ ಎಂದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…