ಮಂಡ್ಯ

ಮಂಡ್ಯ: ಜಿಲ್ಲೆಯಲ್ಲಿ ನಡೆಯುವ ನುಡಿ ಜಾತ್ರೆಯಲ್ಲಿ ದಾಖಲೆ ಸೃಷ್ಠಿ: ಮಹೇಶ್‌ ಜೋಶಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಹೊಸ ದಾಖಲೆಯನ್ನು ಸೃಷ್ಟಿ ಮಾಡುವಲ್ಲಿ ಯಾವುದೇ ಸಂಶಯವಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ ತಿಳಿಸಿದರು.

ಅವರು ಇಂದು ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ  ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೊಸ ಹೆಜ್ಜೆಯನ್ನು ಇಡಲಾಗುವುದು. ಇದು ಮುಂದೆ ಎಲ್ಲ ಸಾಹಿತ್ಯ ಸಮ್ಮೇಳನಕ್ಕೂ ಕೂಡ ಪರಂಪರೆಯಾಗಿ ಮುಂದುವರೆಯುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯ ಸದಸ್ಯರುಗಳು ಮತ್ತು ಜಿಲ್ಲಾಡಳಿತ ಒಟ್ಟಿಗೆ ಸೌಹಾರ್ದತೆಯಿಂದ ಕೆಲಸ ನಿರ್ವಹಿಸಲಿ ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಳೇ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು ಎಂಬಂತೆ ಕಾರ್ಯಕ್ರಮದಲ್ಲಿ ಹೊಸತನವನ್ನು ತರಲು ಆಧುನಿಕರಣದ ಸ್ಪರ್ಶವಾಗಬೇಕಿದೆ. ಹೊಸ ಹೆಜ್ಜೆಯನ್ನು ಇಡುವ ಸಂದರ್ಭದಲ್ಲಿ ಅನೇಕ ಟೀಕೆಗಳಿಗೆ ಗುರಿಯಾಗುವುದು ಸಹಜ ಅದನ್ನು ಸ್ವಾಗತಿಸಬೇಕು. ಪರಸ್ಪರ ಸಹಕಾರ, ಸಹಯೋಗ, ಸಹಭಾಗಿತ್ವ, ಸಹಾಯ ಮನೋಭಾವ, ಸಮನ್ವಯತೆ ಸೌಹಾರ್ದತೆ ಮತ್ತು ಸಮಾಲೋಚನೆಯಿಂದ ಒಟ್ಟಿಗೆ ಕೆಲಸ ಮಾಡಿದಾಗ ಟೀಕೆಗಳು ಸಾಯುತ್ತವೆ ಎಂದರು.

ಸಮ್ಮೇಳನಕ್ಕೆ ಜಿಲ್ಲಾಡಳಿತವು ಸಂಪೂರ್ಣ ಸಹಕಾರವನ್ನು ನೀಡುತ್ತಿದೆ. ಈ ರೀತಿಯ ಸಹಕಾರ ಪ್ರತಿ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಜಿಲ್ಲೆಯಲ್ಲಿ ಸಿಕ್ಕರೆ ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ತೊಂದರೆಯಾಗಲಿ, ಅಪಸ್ವರವಾಗಲಿ ಬರುವುದಿಲ್ಲ ಎಂದರು.

ಸಮ್ಮೇಳನಕ್ಕೆ ಸಂಬಂಧಿಸಿದಂತೆ ಈಗಾಗಲೇ 28 ಸಮಿತಿಗಳು ರಚನೆಯಾಗಿದೆ. ಅವುಗಳಲ್ಲಿ ಮೌಲಿಕ ಚಿಂತನೆಗಳು ಆಗಬೇಕು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಿಗರನ್ನು ಕರೆತರುವ ಅವಶ್ಯಕತೆ ಇಲ್ಲ. ಇದು ಕನ್ನಡಿಗರ, ಕನ್ನಡ ಭಾಷೆಯ, ಕನ್ನಡ ಸಂಸ್ಕೃತಿ, ಕನ್ನಡತನದ ನಮ್ಮ ಅಸ್ಮಿತೆಯ ಸಮ್ಮೇಳನವಾಗಿದೆ. ಇಡೀ ಕರ್ನಾಟಕ ಜಿಲ್ಲೆಯ, ಗಡಿಭಾಗದ ಹಾಗೂ ವಿದೇಶದಲ್ಲಿರುವ ಕನ್ನಡ ಅಭಿಮಾನಿಗಳು ಸ್ವತಃ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

ಕನ್ನಡಕ್ಕೆ ಜಾತಿ, ಧರ್ಮ ಇಲ್ಲ ಕನ್ನಡವೊಂದೇ ಧರ್ಮವಾಗಿದೆ. ಸಮ್ಮೇಳನದಲ್ಲಿ ಕನ್ನಡ ನಾಡು, ನುಡಿ, ಜಲ, ನೆಲದ ಬಗ್ಗೆ ಅತ್ಯಂತ ಗಂಭೀರ ಚರ್ಚೆ ನಡೆಯುತ್ತದೆ. ಇಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಆಡಳಿತ ಹೇಗೆ ನಡೆಯಬೇಕೆಂದು ದಿಕ್ಸೂಚಿಯನ್ನು ತೋರಿಸುತ್ತದೆ. ಜೊತೆಗೆ ಸಮ್ಮೇಳನದಲ್ಲಿ ಭಾವೈಕ್ಯತೆ ಉಂಟಾಗುತ್ತದೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಇಬ್ಬರು ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

14 mins ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

3 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

3 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

3 hours ago