ಮಂಡ್ಯ

ಮಂಡ್ಯ: ಜಿಲ್ಲೆಯಲ್ಲಿ ನಡೆಯುವ ನುಡಿ ಜಾತ್ರೆಯಲ್ಲಿ ದಾಖಲೆ ಸೃಷ್ಠಿ: ಮಹೇಶ್‌ ಜೋಶಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಹೊಸ ದಾಖಲೆಯನ್ನು ಸೃಷ್ಟಿ ಮಾಡುವಲ್ಲಿ ಯಾವುದೇ ಸಂಶಯವಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ ತಿಳಿಸಿದರು.

ಅವರು ಇಂದು ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ  ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೊಸ ಹೆಜ್ಜೆಯನ್ನು ಇಡಲಾಗುವುದು. ಇದು ಮುಂದೆ ಎಲ್ಲ ಸಾಹಿತ್ಯ ಸಮ್ಮೇಳನಕ್ಕೂ ಕೂಡ ಪರಂಪರೆಯಾಗಿ ಮುಂದುವರೆಯುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯ ಸದಸ್ಯರುಗಳು ಮತ್ತು ಜಿಲ್ಲಾಡಳಿತ ಒಟ್ಟಿಗೆ ಸೌಹಾರ್ದತೆಯಿಂದ ಕೆಲಸ ನಿರ್ವಹಿಸಲಿ ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಳೇ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು ಎಂಬಂತೆ ಕಾರ್ಯಕ್ರಮದಲ್ಲಿ ಹೊಸತನವನ್ನು ತರಲು ಆಧುನಿಕರಣದ ಸ್ಪರ್ಶವಾಗಬೇಕಿದೆ. ಹೊಸ ಹೆಜ್ಜೆಯನ್ನು ಇಡುವ ಸಂದರ್ಭದಲ್ಲಿ ಅನೇಕ ಟೀಕೆಗಳಿಗೆ ಗುರಿಯಾಗುವುದು ಸಹಜ ಅದನ್ನು ಸ್ವಾಗತಿಸಬೇಕು. ಪರಸ್ಪರ ಸಹಕಾರ, ಸಹಯೋಗ, ಸಹಭಾಗಿತ್ವ, ಸಹಾಯ ಮನೋಭಾವ, ಸಮನ್ವಯತೆ ಸೌಹಾರ್ದತೆ ಮತ್ತು ಸಮಾಲೋಚನೆಯಿಂದ ಒಟ್ಟಿಗೆ ಕೆಲಸ ಮಾಡಿದಾಗ ಟೀಕೆಗಳು ಸಾಯುತ್ತವೆ ಎಂದರು.

ಸಮ್ಮೇಳನಕ್ಕೆ ಜಿಲ್ಲಾಡಳಿತವು ಸಂಪೂರ್ಣ ಸಹಕಾರವನ್ನು ನೀಡುತ್ತಿದೆ. ಈ ರೀತಿಯ ಸಹಕಾರ ಪ್ರತಿ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಜಿಲ್ಲೆಯಲ್ಲಿ ಸಿಕ್ಕರೆ ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ತೊಂದರೆಯಾಗಲಿ, ಅಪಸ್ವರವಾಗಲಿ ಬರುವುದಿಲ್ಲ ಎಂದರು.

ಸಮ್ಮೇಳನಕ್ಕೆ ಸಂಬಂಧಿಸಿದಂತೆ ಈಗಾಗಲೇ 28 ಸಮಿತಿಗಳು ರಚನೆಯಾಗಿದೆ. ಅವುಗಳಲ್ಲಿ ಮೌಲಿಕ ಚಿಂತನೆಗಳು ಆಗಬೇಕು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಿಗರನ್ನು ಕರೆತರುವ ಅವಶ್ಯಕತೆ ಇಲ್ಲ. ಇದು ಕನ್ನಡಿಗರ, ಕನ್ನಡ ಭಾಷೆಯ, ಕನ್ನಡ ಸಂಸ್ಕೃತಿ, ಕನ್ನಡತನದ ನಮ್ಮ ಅಸ್ಮಿತೆಯ ಸಮ್ಮೇಳನವಾಗಿದೆ. ಇಡೀ ಕರ್ನಾಟಕ ಜಿಲ್ಲೆಯ, ಗಡಿಭಾಗದ ಹಾಗೂ ವಿದೇಶದಲ್ಲಿರುವ ಕನ್ನಡ ಅಭಿಮಾನಿಗಳು ಸ್ವತಃ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

ಕನ್ನಡಕ್ಕೆ ಜಾತಿ, ಧರ್ಮ ಇಲ್ಲ ಕನ್ನಡವೊಂದೇ ಧರ್ಮವಾಗಿದೆ. ಸಮ್ಮೇಳನದಲ್ಲಿ ಕನ್ನಡ ನಾಡು, ನುಡಿ, ಜಲ, ನೆಲದ ಬಗ್ಗೆ ಅತ್ಯಂತ ಗಂಭೀರ ಚರ್ಚೆ ನಡೆಯುತ್ತದೆ. ಇಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಆಡಳಿತ ಹೇಗೆ ನಡೆಯಬೇಕೆಂದು ದಿಕ್ಸೂಚಿಯನ್ನು ತೋರಿಸುತ್ತದೆ. ಜೊತೆಗೆ ಸಮ್ಮೇಳನದಲ್ಲಿ ಭಾವೈಕ್ಯತೆ ಉಂಟಾಗುತ್ತದೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago