ಮಂಡ್ಯ: ತಾಲ್ಲೂಕಿನ ದುದ್ದ ಹೋಬಳಿಯ ಬೀಚನಹಳ್ಳಿ ಗ್ರಾಮವೊಂದರ ಕಬ್ಬಿನ ಗದ್ದೆಯಲ್ಲಿ, ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.
ಗ್ರಾಮದ ನಿವಾಸಿ ಪುಟ್ಟಸ್ವಾಮಿ ಗೌಡ ಅವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಸರಿ ಸುಮಾರು 12 ಅಡಿ ಉದ್ದ 35 —40 ಕಿಲೋ ತೂಕದ ಇಂಡಿಯನ್ ರಾಕ್ ಪೈಥಾನ್ (ಹೆಬ್ಬಾವು) ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ. ಈ ವೇಳೆ ಎಚ್ಚೆತ್ತುಕೊಂಡ ಜಮೀನಿನ ಮಾಲೀಕ ಸರ್ಪ ಮಿತ್ರ ವೈದ್ಯ ಕುದರುಗುಂಡಿ ಮಹೇಶ್ ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಮಹೇಶ್ ಕುಮಾರ್ ಅವರು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು.
ಸುಮಾರು ವರ್ಷಗಳಿಂದ 5000ಕ್ಕೂ ಹೆಚ್ಚು ಉರಗ ಮತ್ತು ವನ್ಯ ಜೀವಿಗಳನ್ನು ರಕ್ಷಿಸುತ್ತಾ, ಅರಣ್ಯ ಇಲಾಖೆಗೆ ಸಹಾಯ ಮಾಡುತ್ತಿರುವ ಸ್ವಯಂಸೇವಕ ಸರ್ಪ ಮಿತ್ರ ಕುದರುಗುಂಡಿ ವೈದ್ಯ ಮಹೇಶ್ ಕುಮಾರ್ ಮತ್ತು ಇಲಾಖೆಯ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದರು. ಈ ವೇಳೆ ಅರಣ್ಯ ಇಲಾಖೆಯ ಗಸ್ತು ಅರಣ್ಯ ಪಾಲಕ ಸಿ. ರಾಜೇಶ್, ಹೆಚ್. ಪ್ರತಾಪ್ ಮತ್ತು ವಾಹನ ಚಾಲಕ ಚಂದ್ರು ಇದ್ದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…