ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪತ್ರಕರ್ತೆ ಹರವು ಸ್ಪೂರ್ತಿ ಅವರ ಪತಿ, ಕೆ.ಎಂ.ದೊಡ್ಡಿ ವೆಂಕಟೇಶ್ ಅವರ ಪುತ್ರ ಬೆಂಗಳೂರಿನ ಖಾಸಗಿ ಕಂಪೆನಿಯ ಸಾಪ್ಟ್ ವೇರ್ ಇಂಜಿನಿಯರ್ ವಿ.ಮನು ಮೃತ ವ್ಯಕ್ತಿ.
ಶನಿವಾರ ಬೆಂಗಳೂರಿನಿಂದ ಸ್ವ-ಗ್ರಾಮ ಕೆ.ಎಂ.ದೊಡ್ಡಿಗೆ ಮನು ಟಾಟಾ ನಿಕ್ಸಾನ್ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದಾಗ ಮಳವಳ್ಳಿಯಿಂದ ಮದ್ದೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಬಸ್ ನ ಮುಂಬದಿಯ ಚಕ್ರ ಪಂಕ್ಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮನು ಅವರನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಗೆ ಕರೆತರುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತರಿಗೆ 6 ವರ್ಷದ ಮಗ ಸುಧನ್ವ, ಪತ್ನಿ ಪತ್ರಕರ್ತೆ ಹರವು ಸ್ಪೂರ್ತಿ ಹಾಗೂ ಪತ್ರಕರ್ತ, ಲೇಖಕ ಹರವು ದೇವೇಗೌಡ ಸೇರಿದಂತೆ ಅಪಾರ ಬಂಧುಗಳಿದ್ದಾರೆ. ಮೃತರ ಅಂತ್ಯಕ್ರಿಯೆ ಕೆ.ಎಂ.ದೊಡ್ಡಿ ಬಳಿಯ ಮೆಣಸಗೆರೆಯಲ್ಲಿ ನಾಳೆ ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…