ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪತ್ರಕರ್ತೆ ಹರವು ಸ್ಪೂರ್ತಿ ಅವರ ಪತಿ, ಕೆ.ಎಂ.ದೊಡ್ಡಿ ವೆಂಕಟೇಶ್ ಅವರ ಪುತ್ರ ಬೆಂಗಳೂರಿನ ಖಾಸಗಿ ಕಂಪೆನಿಯ ಸಾಪ್ಟ್ ವೇರ್ ಇಂಜಿನಿಯರ್ ವಿ.ಮನು ಮೃತ ವ್ಯಕ್ತಿ.
ಶನಿವಾರ ಬೆಂಗಳೂರಿನಿಂದ ಸ್ವ-ಗ್ರಾಮ ಕೆ.ಎಂ.ದೊಡ್ಡಿಗೆ ಮನು ಟಾಟಾ ನಿಕ್ಸಾನ್ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದಾಗ ಮಳವಳ್ಳಿಯಿಂದ ಮದ್ದೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಬಸ್ ನ ಮುಂಬದಿಯ ಚಕ್ರ ಪಂಕ್ಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮನು ಅವರನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಗೆ ಕರೆತರುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತರಿಗೆ 6 ವರ್ಷದ ಮಗ ಸುಧನ್ವ, ಪತ್ನಿ ಪತ್ರಕರ್ತೆ ಹರವು ಸ್ಪೂರ್ತಿ ಹಾಗೂ ಪತ್ರಕರ್ತ, ಲೇಖಕ ಹರವು ದೇವೇಗೌಡ ಸೇರಿದಂತೆ ಅಪಾರ ಬಂಧುಗಳಿದ್ದಾರೆ. ಮೃತರ ಅಂತ್ಯಕ್ರಿಯೆ ಕೆ.ಎಂ.ದೊಡ್ಡಿ ಬಳಿಯ ಮೆಣಸಗೆರೆಯಲ್ಲಿ ನಾಳೆ ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…