ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ರಚಿತ ಪುಸ್ತಕಗಳ ಮಾರಾಟ ಮಳಿಗೆ ತೆರೆದಿದು, ಪುಸ್ತಕ ಪ್ರೇಮಿಗಳು ಪುಸ್ತಕ ಖರೀದಿಸಿ ಪ್ರೋತ್ಸಾಹಿಸಬೇಕು ಎಂದು ವಿಜಯಪುರ ಜಿಲ್ಲೆಯ ಲೇಖಕ ಭೀಮರಾಯ ಹೂಗಾರ ಮನವಿ ಮಾಡಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೇಖಕನಾಗಿ ಇದುವರೆಗೂ ೫೦ ಪುಸ್ತಕಗಳ ರಚನೆ ಮಾಡಿದ್ದು, ವಿಜಯಪುರ ಜಿಲ್ಲೆಯಿಂದ ಮಂಡ್ಯ ಜಿಲ್ಲೆಯವರೆಗೂ ೬೦೦ ಕಿಲೋ ಮೀಟರ್ ರಸ್ತೆಯುದ್ದಕ್ಕೂ ಸ್ಕೂಟರ್ ಮೂಲಕ ಪುಸ್ತಕಗಳ ಪ್ರಚಾರ ಮಾಡಿ ಸಮ್ಮೇಳನ ನಡೆಯುವ ಜಿಲ್ಲೆಯನ್ನು ತಲುಪಿದ್ದೇನೆ ಎಂದರು.
ಇಲ್ಲಿಯವರೆಗೆ ೫೦ ಪುಸ್ತಕ ಪ್ರಕಟಿಸಿರುವುದರ ಜೊತೆಗೆ ಒಂದು ಲಕ್ಷ ನುಡಿ ಮುತ್ತುಗಳನ್ನು ಬರೆದಿದ್ದೇನೆ. ಆನ್ಲೈನ್ ಹಾಗೂ ಸಾಹಿತ್ಯ ಸಮ್ಮೇಳನಗಳಲ್ಲಿ ಲಕ್ಷಾಂತರ ಪುಸ್ತಕಗಳ ಮಾರಾಟ ಮಾಡಿದ್ದೇನೆ. ಇದೀಗ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಲ್ಕು ಮಳಿಗೆಗಳಲ್ಲಿ ಪುಸ್ತಕ ಮಾರಾಟಕ್ಕೆ ಮುಂದಾಗಿದ್ದು, ಪುಸ್ತಕಕ್ಕೆ ಬೆಂಬಲ ನೀಡಬೇಕೆಂದು ಕೋರಿದರು.
ಗೋಷ್ಠಿಯಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಪಿ.ನಾರಾಯಣಸ್ವಾಮಿ ಇದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…