ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ರಚಿತ ಪುಸ್ತಕಗಳ ಮಾರಾಟ ಮಳಿಗೆ ತೆರೆದಿದು, ಪುಸ್ತಕ ಪ್ರೇಮಿಗಳು ಪುಸ್ತಕ ಖರೀದಿಸಿ ಪ್ರೋತ್ಸಾಹಿಸಬೇಕು ಎಂದು ವಿಜಯಪುರ ಜಿಲ್ಲೆಯ ಲೇಖಕ ಭೀಮರಾಯ ಹೂಗಾರ ಮನವಿ ಮಾಡಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೇಖಕನಾಗಿ ಇದುವರೆಗೂ ೫೦ ಪುಸ್ತಕಗಳ ರಚನೆ ಮಾಡಿದ್ದು, ವಿಜಯಪುರ ಜಿಲ್ಲೆಯಿಂದ ಮಂಡ್ಯ ಜಿಲ್ಲೆಯವರೆಗೂ ೬೦೦ ಕಿಲೋ ಮೀಟರ್ ರಸ್ತೆಯುದ್ದಕ್ಕೂ ಸ್ಕೂಟರ್ ಮೂಲಕ ಪುಸ್ತಕಗಳ ಪ್ರಚಾರ ಮಾಡಿ ಸಮ್ಮೇಳನ ನಡೆಯುವ ಜಿಲ್ಲೆಯನ್ನು ತಲುಪಿದ್ದೇನೆ ಎಂದರು.
ಇಲ್ಲಿಯವರೆಗೆ ೫೦ ಪುಸ್ತಕ ಪ್ರಕಟಿಸಿರುವುದರ ಜೊತೆಗೆ ಒಂದು ಲಕ್ಷ ನುಡಿ ಮುತ್ತುಗಳನ್ನು ಬರೆದಿದ್ದೇನೆ. ಆನ್ಲೈನ್ ಹಾಗೂ ಸಾಹಿತ್ಯ ಸಮ್ಮೇಳನಗಳಲ್ಲಿ ಲಕ್ಷಾಂತರ ಪುಸ್ತಕಗಳ ಮಾರಾಟ ಮಾಡಿದ್ದೇನೆ. ಇದೀಗ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಲ್ಕು ಮಳಿಗೆಗಳಲ್ಲಿ ಪುಸ್ತಕ ಮಾರಾಟಕ್ಕೆ ಮುಂದಾಗಿದ್ದು, ಪುಸ್ತಕಕ್ಕೆ ಬೆಂಬಲ ನೀಡಬೇಕೆಂದು ಕೋರಿದರು.
ಗೋಷ್ಠಿಯಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಪಿ.ನಾರಾಯಣಸ್ವಾಮಿ ಇದ್ದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…