ಮಂಡ್ಯ

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟವೂ ಇರಲಿ: ಬಾಡೂಟ ಬಳಗದ ಒಕ್ಕೊರಲ ನಿರ್ಧಾರ

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಡ್ಡಾಯವಾಗಿ ಮಾಂಸದೂಟವನ್ನು ನೀಡಬೇಕು. ಈ ಮೂಲಕ ಮಂಡ್ಯ ನೆಲ ಆಹಾರ ಸಂಸ್ಕೃತಿಯನ್ನು ಗೌರವಿಸುವ ಕೆಲಸ ಮಾಡಬೇಕು. ಜೊತೆಗೆ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಹಾರಿ ತಿನಿಸುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕೆಂದು ವಿವಿಧ ಸಂಘಟನೆಗಳನ್ನೊಳಗೊಂಡ ಬಾಡೂಟ ಬಳಗ ಒಕ್ಕೊರಲ ತೀರ್ಮಾನಕ್ಕೆ ಬಂದಿವೆ.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಭಾನುವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನ ಹೊರಡಿಸಿರುವ ನಿಬಂಧನೆಗಳಲ್ಲಿ ಬಾಡೂಟವನ್ನು ನಿಷೇದಿಸಲಾಗಿದೆ ಎಂಬ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಮುಖಂಡರು, ಮಾಂಸಹಾರ ಅಪರಾಧವೆಂಬಂತೆ ಬಿಂಬಿಸಲಾಗಿದೆ. ಈ ಮೂಲಕ ಬಹುಜನರ ಮಾಂಸಹಾರಿ ಸೇವನೆಗೆ ಅಪಮಾನ ಮಾಡಿದಂತಾಗಿದೆ. ಆಹಾರ ಹಕ್ಕನ್ನು ಅವಮಾನಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಆಗಮಿಸುವ ಸಾಹಿತ್ಯ ಪ್ರಿಯರಿಗೆ ಈಗಾಗಲೇ ಉತ್ತರ ಮತ್ತು ದಕ್ಷಿಣ ಕರ್ನಾಟಕ ಶೈಲಿಯ ಆಹಾರವನ್ನು ಉಣಬಡಿಸಲು ಆಹಾರ ಸಮಿತಿ ನಿರ್ಧರಿಸಿದೆ. ಆದರೆ, ಮಂಡ್ಯ ನೆಲದ ಆಹಾರ ಸಂಸ್ಕೃತಿಯಾದ ಮಾಂಸಾಹಾರ ಸೇವನೆಗೆ ಅವಕಾಶ ನೀಡದಿರುವುದು ಸರಿಯಲ್ಲ. ಅಲ್ಲದೆ, ಮಾಂಸಾಹಾರ ಸೇವನೆಯನ್ನು ಕೀಳಾಗಿ ಕಾಣುತ್ತಿರುವುದು ಒಪ್ಪುವಂತದ್ದಲ್ಲ. ಈ ಕಾರಣದಿಂದ ಸಮ್ಮೇಳನದಲ್ಲಿ ಕಡ್ಡಾಯವಾಗಿ ಬಾಡೂಟ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಇದುವರೆಗೂ ನಡೆದಿರುವ ಎಲ್ಲ ಸಮ್ಮೇಳನಗಳಲ್ಲೂ ಸಸ್ಯಾಹಾರವನ್ನು ಮಾತ್ರವೇ ನೀಡಲಾಗುತ್ತಿದ್ದು, ಆಯಾ ನೆಲದ ಸಂಸ್ಕೃತಿಗೆ ಅನುಗುಣವಾಗಿ ಆಹಾರವನ್ನು ಕೊಡಲಾಗಿದೆ. ಅದೇ ಪರಂಪರೆಯನ್ನು ಮಂಡ್ಯದಲ್ಲೂ ಮುಂದುವರಿಸುವುದಾಗಿ ಹೇಳುತ್ತಲೇ ಬಹುಜನರ ಆಹಾರ ಸಂಸ್ಕೃತಿಯಾದ ಮಾಂಸಾಹಾರ ಸೇವನೆಗೆ ತಡೆಯುಂಟು ಮಾಡುವ ಅಥವಾ ಸಮ್ಮೇಳನಗಳಲ್ಲಿ ಮಾಂಸಾಹಾರ ಸೇವನೆಗೆ ಅವಕಾಶ ನೀಡದಂತೆ ಮಡಿವಂತಿಕೆಯನ್ನು ಪಾಲಿಸುವ ಒಳತಂತ್ರಗಳು ನಡೆಯುತ್ತಿದೆ.
ಮಂಡ್ಯ ಭಾಗದ ಮುದ್ದೆ ಮತ್ತು ನಾಟಿಕೋಳಿ ಸಾರಿಗೆ ವಿಶೇಷ ಮಾನ್ಯತೆ ಇದ್ದು, ಈ ಆಹಾರ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಸಮ್ಮೇಳನದಲ್ಲಿ ಮಾಂಸಾಹಾರದ ಕಡ್ಡಾಯವನ್ನು ಒತ್ತಾಯಿಸುತ್ತಿದ್ದೀವೆಯೇ ವಿನಃ ಇದರಲ್ಲಿ ಸಸ್ಯಹಾರಿಗಳನ್ನು ಗುರಿಯಾಗಿಸುವ ಯಾವುದೇ ಉದ್ದೇಶವಿಲ್ಲ. ಅಲ್ಲದೆ, ಸಸ್ಯಹಾರಿಗಳಿಗೆ ಪ್ರಿಯವಾದ ಎಲ್ಲ ಬಗೆಯ ಭೋಜನಗಳನ್ನು ಸವಿಯಲು ಅವರಿಗೆ ಪ್ರತ್ಯೇಕ ಅವಕಾಶವಿರುವುದರಿಂದ ಮಾಂಸಪ್ರಿಯರಿಗೂ ಸಮ್ಮೇಳನ ಸಮಾನ ಆದ್ಯತೆ ನೀಡಬೇಕೆಂದು ಬಳಗದ ಸದಸ್ಯರು ಒತ್ತಾಯಿಸಿದರು.

ಮನವಿಗೆ ಸ್ಪಂದಿಸದಿದ್ದರೆ ಸ್ವಯಂ ಪ್ರೇರಿತ ಬಾಡೂಟದ ಚಿಂತನೆ
ಈಗಾಗಲೇ ಈ ಬಗ್ಗೆ ಜಿಲ್ಲಾಡಳಿತದ ಮತ್ತು ಸಮ್ಮೇಳನದ ಮುಖ್ಯಸ್ಥರ ಗಮನ ಸೆಳೆಯಲಾಗಿದ್ದು, ಡಿ.9ರಂದು ಜಿಲ್ಲಾಧಿಕಾರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಆಹಾರ ಸಮಿತಿ ಅಧ್ಯಕ್ಷರು, ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಪರಿಷತ್ ರಾಜ್ಯಾಧ್ಯಕ್ಷರ ಗಮನಕ್ಕೂ ತರಲಾಗುವುದು. ಒಂದು ವೇಳೆ ನಮ್ಮ ಒತ್ತಾಯಕ್ಕೆ ಸ್ಪಂದಿಸದಿದ್ದರೆ ಸ್ವಯಂ ಪ್ರೇರಿತವಾಗಿ ಸಮ್ಮೇಳನದ ಮೊದಲನೇ ದಿನ ಮೊಟ್ಟೆ ವಿತರಣೆ, ಎರಡನೇ ದಿನ ಮುದ್ದೆ ನಾಟಿ ಕೋಳಿ ಸಾಂಬಾರ್, ಮೂರನೇ ದಿನ ಬಿರಿಯಾನಿಯನ್ನು ವಿತರಿಸುವ ಚಿಂತನೆಯನ್ನು ನಡೆಸಲಾಗಿದೆ. ಇದಕ್ಕೆ ಪೂರಕವಾಗಿ ಮನೆಗೊಂದು ಕೋಳಿಯನ್ನು ಸಂಗ್ರಹಿಸುವ ಅಭಿಯಾನವನ್ನು ನಡೆಸುವುದಾಗಿ ಮುಖಂಡರು ಎಚ್ಚರಿಕೆ ನೀಡಿದರು.

ವಿವಿಧ ಸಂಘಟನೆಗಳ ಮುಖಂಡರಾದ ಟಿ.ಎಲ್.ಕೃಷ್ಣೇಗೌಡ, ಸಿ.ಕುಮಾರಿ, ಟಿ.ಡಿ.ನಾಗರಾಜು, ಸಿ.ಎಂ.ದ್ಯಾವಪ್ಪ, ಸಿ.ಆರ್.ರಮೇಶ್, ಎಲ್.ಸಂದೇಶ್, ಎಚ್.ಡಿ.ಜಯರಾಂ, ಎಂ.ಬಿ.ನಾಗಣ್ಣಗೌಡ, ಲಕ್ಷö್ಮಣ್ ಚೀರನಹಳ್ಳಿ, ಶಂಕರಲಿಂಗೇಗೌಡ, ಲಂಕೇಶ್, ಕೀಲಾರ ಸುರೇಶ, ಕೀಲಾರ ಕೃಷ್ಣೇಗೌಡ, ಟಿ.ಯಶ್ವಂತ್, ಸುಂಡಹಳ್ಳಿ ಮಂಜುನಾಥ್, ಚಂದಗಾಲು ವಿಜಯಕುಮಾರ್, ಸಂತೋಷ್, ನರಸಿಂಹಮೂರ್ತಿ, ಜಿ.ಎನ್.ಕೆಂಪರಾಜು, ಶಿವರಾಂ ಸೇರಿದಂತೆ ಮತ್ತಿತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

50 mins ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

1 hour ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

2 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

6 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

6 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

7 hours ago