ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಇತ್ತ ಕೃಷಿ ಚಟುವಟಿಕೆಯು ಸಹ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ(ಜು.19) ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಲಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದ್ದು, ರೈತರಿಗೆ ಅನುಕೂಲವಾಗುವಂತೆ ಬೇಡಿಕೆಗಿಂತ ಹೆಚ್ಚಿನ ಬಿತ್ತನೆ ಬೀಜ ಜಿಲ್ಲೆಯಲ್ಲಿದೆ. ರೈತರಿಗೆ ಅನುಕೂಲವಾಗುವಂತೆ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಇಂದಿನಿಂದ ಬೆಳಿಗ್ಗೆ 8 ಗಂಟೆಗೆ ಖರೀದಿ ಕೇಂದ್ರಗಳು ತೆರಯಲಿದೆ ಎಂದರು.
ದಾಸ್ತಾನು ವಿವರ ಪ್ರಕಟಿಸಿ
ರೈತ ಸಂಪರ್ಕ ಕೇಂದ್ರ, ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ರಸಗೊಬ್ಬರ ಮಾರಾಟ ಕೇಂದ್ರಗಳಲ್ಲಿ ಯಾವುದೇ ನೂಕು ನುಗ್ಗಲು ಉಂಟಾಗದಂತೆ ವ್ಯವಸ್ಥೆ ಮಾಡಿ. ದಾಸ್ತಾನು ಇರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿವರವನ್ನು ಪ್ರಕಟಿಸಿ ಇದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದು ಮನವರಿಕೆ ಆಗುತ್ತದೆ ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
ತಹಶೀಲ್ದಾರ್ ಹಾಗೂ ಕೃಷಿ ಸಹಾಯಕ ನಿರ್ದೇಶಕರು ಪ್ರತಿ ದಿನ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗಳು ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಿ ಸೌಹರ್ದತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದೇನೆ. ಬಿತ್ತನೆ ಬೀಜಗಳ ಮೊಳಕೆ ಹೊಡೆಯುವ ಪರೀಕ್ಷೆಗಳನ್ನು (germination test) ಕಡ್ಡಾಯವಾಗಿ ಇಲಾಖೆ ನೀಡಿರುವ ಸೂಚನೆಗಳಂತೆ ಅಧಿಕಾರಿಗಳು ನಡೆಸಬೇಕು ಎಂದು ತಿಳಿಸಿದ್ದೇನೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…