ಮಂಡ್ಯ

ಮಂಡ್ಯ| ಇಂದಿನಿಂದ ಬಿತ್ತನೆ ಬೀಜ ಮಾರಾಟ ಪ್ರಾರಂಭ

ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಇತ್ತ ಕೃಷಿ ಚಟುವಟಿಕೆಯು ಸಹ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ(ಜು.19) ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಲಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದ್ದು, ರೈತರಿಗೆ ಅನುಕೂಲವಾಗುವಂತೆ ಬೇಡಿಕೆಗಿಂತ ಹೆಚ್ಚಿನ ಬಿತ್ತನೆ ಬೀಜ ಜಿಲ್ಲೆಯಲ್ಲಿದೆ. ರೈತರಿಗೆ ಅನುಕೂಲವಾಗುವಂತೆ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಇಂದಿನಿಂದ ಬೆಳಿಗ್ಗೆ 8 ಗಂಟೆಗೆ ಖರೀದಿ ಕೇಂದ್ರಗಳು ತೆರಯಲಿದೆ ಎಂದರು.

ದಾಸ್ತಾನು ವಿವರ ಪ್ರಕಟಿಸಿ
ರೈತ ಸಂಪರ್ಕ ಕೇಂದ್ರ, ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ರಸಗೊಬ್ಬರ ಮಾರಾಟ ಕೇಂದ್ರಗಳಲ್ಲಿ ಯಾವುದೇ ನೂಕು ನುಗ್ಗಲು ಉಂಟಾಗದಂತೆ ವ್ಯವಸ್ಥೆ ಮಾಡಿ. ದಾಸ್ತಾನು ‌ಇರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿವರವನ್ನು ಪ್ರಕಟಿಸಿ ಇದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದು ಮನವರಿಕೆ ಆಗುತ್ತದೆ ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ತಹಶೀಲ್ದಾರ್ ಹಾಗೂ ಕೃಷಿ ಸಹಾಯಕ ನಿರ್ದೇಶಕರು ಪ್ರತಿ ದಿನ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗಳು ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಿ ಸೌಹರ್ದತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದೇನೆ. ಬಿತ್ತನೆ ಬೀಜಗಳ ಮೊಳಕೆ ಹೊಡೆಯುವ ಪರೀಕ್ಷೆಗಳನ್ನು (germination test) ಕಡ್ಡಾಯವಾಗಿ ಇಲಾಖೆ ನೀಡಿರುವ ಸೂಚನೆಗಳಂತೆ ಅಧಿಕಾರಿಗಳು ನಡೆಸಬೇಕು ಎಂದು ತಿಳಿಸಿದ್ದೇನೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago