ಮಂಡ್ಯ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾಗಿದ್ದ ಶಿವಾನಂದ ಮೂರ್ತಿ ಅವರನ್ನು ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣ ಜಾರಿಗೆ ಬರುವಂತೆ ಹಿಂದಿನ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಬಿ.ಸಿ ಶಿವಮೂರ್ತಿ ಅವರು ಈ ಹಿಂದೆ ಪಾಂಡವಪುರ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಹೆಚ್.ಎಲ್ ನಾಗರಾಜು ಅವರು ಸನ್ಯಾಸತ್ವ ಸ್ವೀಕಾರ ಮಾಡುವುದು ಖಚಿತವಾಗಿದ್ದು, ಹೀಗಾಗಿ ಅವರು ತಮ್ಮ ಕರ್ತವ್ಯಕ್ಕೆ ಸುದೀರ್ಘ ರಜೆ ಹಾಕಿದ್ದಾರೆ ಎನ್ನಲಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…