ಮಂಡ್ಯ

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ

ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ ಮುಂಜಾನೆ ಗೂಡ್ಸ್ ವಾಹನದ ಚಾಲಕನ ಮೇಲೆ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು, ಒಂದು ಪಿಸ್ತೂಲ್, ಕಾರ್ಬನ್ ರೀಫಿಲ್ಸ್-02 ಪಿಲ್ಲೇಟ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿ.ಜೆ. ಶೋಭಾರಾಣಿ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಅಶೋಕನಗರದ ನಿವಾಸಿ, ಕಾನೂನು ವಿದ್ಯಾರ್ಥಿ ಎಚ್.ವಿ.ರೋಹನ್‌ಗೌಡ (23), ಮರೀಗೌಡ ಬಡಾವಣೆಯ ಬಿ.ಇ.ವಿದ್ಯಾರ್ಥಿ ಶಶಾಂಕ್ (25), ಕಾರಸವಾಡಿ ರಸ್ತೆಯಲ್ಲಿರುವ ದ್ವಾರಕಾನಗರದ ನಿವಾಸಿ ಅಫಾನ್ (25), ಕುವೆಂಪುನಗರದ ಮಹಮ್ಮದ್ ಉಮರ್, ವಿದ್ಯಾನಗರದ ನಿತಿನ್ (27), ಗಾಂಧಿನಗದ ಮಹಮ್ಮದ್ ಅಬೂಬಕರ್ (25), ವಿದ್ಯಾನಗದ ನಿವಾಸಿ, ಡೆಲಿವರಿ ಹೆಡ್ ಸಚಿನ್ (26) ಎಂಬವರೇ ಬಂಧಿತ ಆರೋಪಿಗಳು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಘಟನೆಯ ಹಿನ್ನೆಲೆ:
ಮೈಸೂರಿನ ನಿವಾಸಿ, ಸೂಪರ್ ಸ್ಪೀಡ್ ಸರ್ವಿಸ್ ಕೊರಿಯರ್‌ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿರುವ ಶಂಕರ್ ಅವರು ಜು.2ರಂದು ತಡರಾತ್ರಿ 2 ಗಂಟೆ ಸಮಯದಲ್ಲಿ ಬೆಂಗಳೂರಿನ ಕೊರಿಯರ್ ಕಚೇರಿಯಿಂದ ಪಾರ್ಸೆಲ್ ತುಂಬಿಕೊಂಡು ಟಾಟಾ ಗೂಡ್ಸ್ ವಾಹನದಲ್ಲಿ ಹೆದ್ದಾರಿ ಮೂಲಕ ಮೈಸೂರಿಗೆ ಬರುತ್ತಿದ್ದಾಗ ಮಂಡ್ಯ ಹೊರವಲಯದಲ್ಲಿರುವ ಅಮರಾವತಿ ಹೋಟೆಲ್ ಬಳಿ ಹಿಂಬದಿ ಕಾರಿನಲ್ಲಿ ಬರುತ್ತಿದ್ದ ಆರೋಪಿ ಎಚ್.ವಿ.ರೋಹನ್‌ಗೌಡ ಮತ್ತು ಸ್ನೇಹಿತರು ಗೂಡ್ಸ್ ವಾಹನವನ್ನು ಓವರ್ ಟೇಕ್ ಮಾಡಿ 4.50ರ ಸಮಯದಲ್ಲಿ ಗೂಡ್ಸ್ ವಾಹನವನ್ನು ಅಡ್ಡಗಟ್ಟಿ ಚಾಲಕ ಶಂಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಕಾರಿನ ಚಾಲಕನು ಕಿಟಕಿ ಮೂಲಕ ಯಾವುದೋ ಆಯುಧವನ್ನು ಹೊರತೆಗೆದು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಆದರೆ, ಯಾವುದೇ ಅನಾಹುತ ಸಂಭವಿಸಿಲ್ಲ. ನಂತರ ಕಾರಿನ ಚಾಲಕ ಹಾಗೂ ಕಾರಿನಲ್ಲಿದ್ದ ಇನ್ನುಳಿದವರು ಕಾರನ್ನು ನಿಲ್ಲಿಸದೆ ಚಾಲನೆ ಮಾಡಿಕೊಂಡು ಪರಾರಿಯಾದರು ಎಂದು ಚಾಲಕ ಶಂಕರ್ ತಿಳಿಸಿದ್ದಾರೆ ಎಂದರು.

ನಂತರ ಈ ಘಟನೆಯಿಂದ ಹೆದರಿದ ಗೂಡ್ಸ್ ವಾಹನದ ಚಾಲಕ ಶಂಕರ್ ವಾಹನವನ್ನು ಮೈಸೂರಿನಲ್ಲಿರುವ ತಮ್ಮ ಕಚೇರಿಗೆ ತೆಗೆದುಕೊಂಡು ಹೋಗಿ ನಿಲ್ಲಿಸಿ ಸುಮ್ಮನಾಗಿದ್ದನು. ಈ ವಿಷಯ ತಿಳಿದು ಚಾಲಕ ಶಂಕರ್‌ನನ್ನು ಕರೆಯಿಸಿ ವಿಚಾರಣೆ ಮಾಡಲಾಗಿ ನಡೆದಿರುವ ವಿಷಯವನ್ನು ತಿಳಿಸಿದರು.

ಬಳಿಕ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಶುಕ್ರವಾರ ರಾತ್ರಿ 11ರ ಸಮಯದಲ್ಲಿ ಗೂಡ್ಸ್ ವಾಹನದ ಚಾಲಕ ಶಂಕರ್ ಅವರು ದೂರು ದಾಖಲಿಸಿದ್ದಾರೆ. ಈ ಸಂಬಂಧವಾಗಿ ತನಿಖೆ ನಡೆಸಿದಾಗ ಕಾರಿನ ನಂಬರ್ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಫಾರ್ಚುನರ್ ಕಪ್ಪು ಬಣ್ಣದ ಕಾರು ಹಾಗೂ ಒಂದು ಪಿಸ್ತೂಲ್ (ಓ2 ಏರ್ ಪಿಸ್ತೂಲ್), ಕಾರ್ಬನ್ ರೀಫಿಲ್ಸ್-02, ಪಿಲ್ಲೇಟ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಶೋಭಾರಾಣಿ ಅವರು ಹೇಳಿದರು.

ಏರ್ ಗನ್‌ನಿಂದ ಫೈಯರ್…
ಕುಡಿದ ಮತ್ತಿನಲ್ಲಿ ಏರ್ ಗನ್ ಬಳಸಿ ಫೈಯರ್ ಮಾಡಿದ್ದಾಗಿ ಆರೋಪಿಗಳು ಹೇಳಿದ್ದಾರೆ. ಬರ್ತ್ ಡೇ ಪಾರ್ಟಿ ಮುಗಿಸಿ ಬರುವಾಗ ಫೈಯರ್ ಮಾಡಿದ್ದಾರೆ. ಹಾರ್ನ್ ಮಾಡಿದರೂ ಗೂಡ್ಸ್ ವಾಹನದ ಚಾಲಕ ಜಾಗ ಬಿಡದ ಕಾರಣ ಮುಂದೆ ಬಂದು ಕಾರ್ ಗ್ಲಾಸ್ ಇಳಿಸಿ ಫೈಯರ್ ಮಾಡಿದ್ದು, ತಮಾಷೆಗಾಗಿ ಏರ್‌ಗನ್‌ನಿಂದ ಫೈಯರ್ ಮಾಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ. ಅದು ಯಾವ ಗನ್ ಎಂದು ತಿಳಿದುಕೊಳ್ಳಲು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಅವರು ಮಾದಕ ವ್ಯಸನ ಸೇವಿಸಿರುವ ಬಗ್ಗೆಯೂ ವೈದ್ಯಕೀಯ ಪರೀಕ್ಷೆ ಮಾಡಿಸಲಾಗುವುದು ಎಂದು ಎಸ್‌ಪಿ ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago