ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ.ಮಾದೇಗೌಡ (44) ಎಂಬುವವರೇ ಹೃದಯಾಘಾತದಿಂದ ಮೃತಟಪಟ್ಟಿರುವ ಯೋಧನಾಗಿದ್ದಾರೆ. ಗಡಿ ಭದ್ರತಾ ಪಡೆ (ಬಿ.ಎಸ್.ಎಫ್.) ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾದೇಗೌಡ ಅವರು, ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಳೆದ 2000ರಲ್ಲಿ ಮೈಸೂರಿನಲ್ಲಿ ನಡೆದ BSF ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿ BSF ಸೇರಿದ್ದ ಮಾದೇಗೌಡ ಅವರು, ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ ಎಸ್.ಶಿಲ್ಪಾ, ಪುತ್ರ ಮತ್ತು ಪುತ್ರಿ ಇದ್ದಾರೆ.
ಮಂಡ್ಯಕ್ಕೆ ಆಗಮಿಸಿದ್ದ ಮೃತ ಯೋಧನ ಪಾರ್ಥಿವ ಶರೀರವನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಇರಿಸಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು. ಶಾಸಕ ಗಣಿಗ ರವಿಕುಮಾರ್, ಡಿಸಿ ಡಾ.ಕುಮಾರ, ಎಸ್ಪಿ ಶೋಭಾರಾಣಿ ಅವರು, ಪುಷ್ಪಗುಚ್ಛ ಇರಿಸಿ ಗೌರವ ನಮನ ಸಲ್ಲಿಸಿದರು.
ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಹುತಾತ್ಮ ಯೋಧನಿಗೆ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ಮೃತ ಕುಟುಂಬಕ್ಕೆ ಶಾಸಕರು ಹಾಗೂ ಅಧಿಕಾರಿಗಳು ಸಾಂತ್ವನ ಹೇಳಿದರು.
ಮೃತ ಯೋಧ ಮಾದೇಗೌಡರನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದು, ಮಧ್ಯಾಹ್ನದ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ…
ಥೈಲ್ಯಾಂಡ್ನ ಈಶಾನ್ಯದಲ್ಲಿ ಕ್ರೇನ್ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…
ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(45)…
ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ…
ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ…
ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು…