ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ.ಮಾದೇಗೌಡ (44) ಎಂಬುವವರೇ ಹೃದಯಾಘಾತದಿಂದ ಮೃತಟಪಟ್ಟಿರುವ ಯೋಧನಾಗಿದ್ದಾರೆ. ಗಡಿ ಭದ್ರತಾ ಪಡೆ (ಬಿ.ಎಸ್.ಎಫ್.) ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾದೇಗೌಡ ಅವರು, ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಳೆದ 2000ರಲ್ಲಿ ಮೈಸೂರಿನಲ್ಲಿ ನಡೆದ BSF ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿ BSF ಸೇರಿದ್ದ ಮಾದೇಗೌಡ ಅವರು, ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ ಎಸ್.ಶಿಲ್ಪಾ, ಪುತ್ರ ಮತ್ತು ಪುತ್ರಿ ಇದ್ದಾರೆ.
ಮಂಡ್ಯಕ್ಕೆ ಆಗಮಿಸಿದ್ದ ಮೃತ ಯೋಧನ ಪಾರ್ಥಿವ ಶರೀರವನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಇರಿಸಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು. ಶಾಸಕ ಗಣಿಗ ರವಿಕುಮಾರ್, ಡಿಸಿ ಡಾ.ಕುಮಾರ, ಎಸ್ಪಿ ಶೋಭಾರಾಣಿ ಅವರು, ಪುಷ್ಪಗುಚ್ಛ ಇರಿಸಿ ಗೌರವ ನಮನ ಸಲ್ಲಿಸಿದರು.
ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಹುತಾತ್ಮ ಯೋಧನಿಗೆ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ಮೃತ ಕುಟುಂಬಕ್ಕೆ ಶಾಸಕರು ಹಾಗೂ ಅಧಿಕಾರಿಗಳು ಸಾಂತ್ವನ ಹೇಳಿದರು.
ಮೃತ ಯೋಧ ಮಾದೇಗೌಡರನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದು, ಮಧ್ಯಾಹ್ನದ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…