ಮಂಡ್ಯ: ಜಿ ಎಸ್ ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ವಿತರಣಾ ಸಮಾರಂಭವು ನಾಗಮಂಗಲ ಪಟ್ಟಣದ ಎ. ಪಿ. ಎಂ. ಸಿ ಆವರಣದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಧಾನ್ಯ ಕ್ಕೆ ಪೂಜೆ ಸಲ್ಲಿಸಿ. ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಸಹ ರೈತರಿಗೆ ಬಿತ್ತನೆ ಬೀಜವನ್ನು ವಿತರಿಸುವ ಕೆಲಸವನ್ನು ಮಾಡಲಾಗುತ್ತಿದೆ. ಕಡಿಮೆ ಇಳುವರಿ ಹೊಂದಿರುವ ಪ್ರದೇಶದಲ್ಲಿ ಸುಮಾರು 4 ಸಾವಿರ ರೈತರನ್ನು ಆಯ್ಕೆ ಮಾಡಿದ್ದು, ಅವರನ್ನು ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್ ಜಮೀನಿಗೆ 6 ಸಾವಿರ ರೂಪಾಯಿ ಪ್ರೋತ್ಸಾಹ ಹಣವನ್ನು ನೀಡಲಾಗುತ್ತಿದೆ. ಅದರಲ್ಲಿ 4.5ಸಾವಿರ ಪರಿಕರ ಹಾಗೂ 1.5 ಸಾವಿರ ಹಣ ನೇರವಾಗಿ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ. ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢವಾಗುವಂತೆ ತಿಳಿಸಿದರು.
ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ ಮಾರಾಟಗಾರರು ಖರೀದಿಗೆ ರೈತರು ಅಧಿಕೃತ ರಶೀದಿ ಪಡೆದುಕೊಳ್ಳಬೇಕು. ಯಾವುದಾರರೂ ತೊಂದರೆ ಇದ್ದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.
ಇದೇ ಸಂದರ್ಭದಲ್ಲಿ ರೈತರಿಗೆ ರಾಗಿ ಬಿತ್ತನೆ ಬೀಜಗಳನ್ನು ವಿತರಿಸಿ ಪ್ರಗತಿಪರ ರೈತರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು
ನಂತರ ಮೃತ ರೈತರ ಕುಟುಂಬಕ್ಕೆ ಸರ್ಕಾರ ವತಿಯಿಂದ 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.
ವೇದಿಕೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್. ಸೇರಿದಂತೆ ಪ್ರಗತಿಪರ ರೈತರು ಹಾಗೂ ಕೃಷಿ. ಅರಣ್ಯ. ತೋಟಗಾರಿಕೆ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…