ಮಂಡ್ಯ

ಮಂಡ್ಯ | ಜಿಲ್ಲೆಯಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ

ಮಂಡ್ಯ : ಮಹಾತ್ಮ ಗಾಂಧೀಜಿ  ಅವರು ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸುವ ಕನಸು ಹೊತ್ತಿದ್ದರು. ಹೀಗಾಗಿ ಅವರ ನೆನಪಿನಲ್ಲಿ ಅವರ ಹುತಾತ್ಮ ದಿನವಾದ ಇಂದು (ಜನವರಿ 30)  ಸ್ಪರ್ಶ್ ಕುಷ್ಠರೋಗದ ಅರಿವು ಆಂದೋಲನ ಹಮ್ಮಿಕೊಳ್ಳಲಾಗಿತ್ತು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಫಲಾಗಿದ್ದ ಸ್ಪಶ್೯ ಕುಷ್ಠ ರೋಗ ಅರಿವು ಆಂದೋಲನದ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕುಷ್ಠರೋಗವನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿ ವೈದ್ಯರ ಬಳಿ ಪರೀಕ್ಷೆಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖ ಮಾಡಿಕೊಳ್ಳುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.

ಸಾರ್ವಜನಿಕರಿಗೆ ಕುಷ್ಠರೋಗ ಗುಣಮುಖವಾಗುವುದಿಲ್ಲ ಎಂಬ ಮೂಡನಂಬಿಕೆ ಇದೆ. ಅದನ್ನು ಹೋಗಲಾಡಿಸಬೇಕು.ಇತರೆ ಖಾಯಿಲೆಗಳಂತೆ ಇದೂ ಸಹ ಸಾಮಾನ್ಯ ಖಾಯಿಲೆಗಳಂತೆ ಬಹುಔಷಧಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದಾದ ಖಾಯಿಲೆ ಎಂದು ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ: ಮೋಹನ್ ಮಾತನಾಡಿ, ಜನರಲ್ಲಿ ಕುಷ್ಠರೋಗದ ಕುರಿತು ಇರುವ ಅವೈಜ್ಞಾನಿಕ ನಂಬಿಕೆಗಳು ಹೋಗಲಾಡಿಸಿ, ಜನರಿಗೆ ಕುಷ್ಠರೋಗದ ಅರಿವು ಮೂಡಿಸುವುದು ಈ ಆಂದೋಲನದ ಮೂಲ ಉದ್ದೇಶ, ಕುಷ್ಠರೋಗದ ಮುನ್ಸೂಚನೆ ಬಂದಲ್ಲಿ ಯಾವುದೇ ಭಯ ಪಡದೆ ಚಿಕಿತ್ಸೆ ಪಡೆದುಕೊಳ್ಳಿ ಎಂದು ಹೇಳಿದರು.

ಜಿಲ್ಲಾಧಿಕಾರಿಗಳು ಕುಷ್ಠರೋಗ ಆಂದೋಲನದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಪ್ರತಿಜ್ಞೆ ಬೋಧಿಸಿದರು ಹಾಗೂ ಹಸಿರು ಬಣ್ಣದ ಬಾವುಟ ಪ್ರದರ್ಶಿಸುವ ಮೂಲಕ ಜಾಥಗೆ ಚಾಲನೆ ನೀಡಿದರು.

ಜಾಥಾವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿಯವರೆಗೂ ಕುಷ್ಠರೋಗದ ಕುರಿತು ಜಾಗೃತಿ ಜಾಥಾ ನಡೆಸಲಾಯಿತು, ವಿವಿಧ ಕಾಲೇಜುಗಳ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್.ರಾಜಮೂರ್ತಿ ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

7 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

7 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

7 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

7 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

8 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

9 hours ago