ಮಂಡ್ಯ

ಮಂಡ್ಯ: ಜಿಲ್ಲೆಯಲ್ಲಿ ಆಗಸ್ಟ್ 20 ರಿಂದ ಅಕ್ಟೋಬರ್ 18 ರವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: ಡಾ ಕುಮಾರ

ಮಂಡ್ಯ: ಭಾರತೀಯ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01 ಜನವರಿ 2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿರುವ ಸಂಬಂಧ ಜಿಲ್ಲೆಯಲ್ಲಿ ಆಗಸ್ಟ್ 20 ರಿಂದ ಅಕ್ಟೋಬರ್ 18 ರವರೆಗೆ ಮತದಾರರ ಪಟ್ಟಿಯ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

ಅವರು ಇಂದು(ಆ.17) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2025 ರ ಸಂಬಂಧ ವೀಡಿಯೊ ಸಂವಾದ ಸಭೆಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ 18 ವರ್ಷ ತುಂಬಿರುವ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಅಗತ್ಯವಿರುವ ಕಡೆ ಮತದಾರರ ಪಟ್ಟಿಯಲ್ಲಿನ ಗುಣಮಟ್ಟವಿಲ್ಲದ ಭಾವಚಿತ್ರಗಳನ್ನು ಬದಲಾಯಿಸಿ ಮತದಾರರ ಉತ್ತಮ ಗುಣಮಟ್ಟದ ಭಾವಚಿತ್ರಗಳನ್ನು ಅಳವಡಿಸಲಾಗುವುದು ಎಂದರು.

ಮತಗಟ್ಟೆಗಳ ಭೌತಿಕ ಪರಿಶೀಲನೆ ನಡೆಸುವುದು, 1 ಮತಗಟ್ಟೆಯಲ್ಲಿ 1500 ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿದ್ದರೆ ಅಲ್ಲಿ 2 ಮತಗಟ್ಟೆಯನ್ನು ಸ್ಥಾಪಿಸಲು ತಯಾರಿ ನಡೆಸಲಾಗುವುದು ಎಂದರು.

ಇ – ಜನ್ಮ ತಂತ್ರಾಶದಿಂದ ಜಿಲ್ಲೆಯಲ್ಲಿ ಮರಣ ಹೊಂದಿರುವ ಮತದಾರರ ವಿವರವನ್ನು ಪಡೆದು ಪರಿಶೀಲಿಸಿ ನಂತರ ಮರಣ ಹೊಂದಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುವುದು ಎಂದರು.

ಜಿಲ್ಲೆಯ ಮತದಾರರ ಪಟ್ಟಿ/ಮತದಾರರ ಗುರುತಿನ ಚೀಟಿಗಳಲ್ಲಿ ಹೆಸರು, ವಿಳಾಸ ಮುಂತಾದ ಯಾವುದೇ ರೀತಿಯ ತಿದ್ದುಪಡಿಗಳು ಇದ್ದಲ್ಲಿ ಮತದಾರರು ಲೋಪದೋಷಗಳನ್ನು ಸರಿಪಡಿಸಿಕೊಂಡು ಪರಿಷ್ಕರಿಸಿಕೊಳ್ಳುವುದು. ಒಂದೇ ಕುಟುಂಬದ ಮತದಾರರನ್ನು ಒಂದೇ ಮತಗಟ್ಟೆಯಲ್ಲಿ ಹೆಸರು ಬರುವಂತೆ ಸರಿಪಡಿಸಲಾಗುವುದು ಎಂದರು.

ಜಿಲ್ಲೆಯ ಉಪ ವಿಭಾಗಾಧಿಕಾರಿಗಳು ಮತದಾರರ ನೊಂದಣಾಧಿಕಾರಿಯಾಗಿ ಹಾಗೂ ತಹಶೀಲ್ದಾರರು ಸಹಾಯಕ ನೋಂದಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಉಪ ವಿಭಾಗಧಿಕಾರಿ ನಂದೀಶ್, ಚುನಾವಣಾ ತಹಶೀಲ್ದಾರ್ ರವಿಶಂಕರ್ ಸಿ ಜಿ ಹಾಗೂ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

8 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

9 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

10 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

11 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

16 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

18 hours ago