ಮಂಡ್ಯ: ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನವೆಂಬರ್ ೧ರಿಂದ ಡಿಸೆಂಬರ್ ೧ರವರೆಗೆ ನಡೆಸಲಾಗುವುದು ಎಂದು ಅಸೋಸಿಯೇಷನ್ನ ಸಂಸ್ಥಾಪಕ ಅಧ್ಯಕ್ಷ ಗಂಗಾಧರ್ ರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ೩೧ ಜಿಲ್ಲೆಗಳ ಪೈಕಿ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ೩೨ ತಂಡಗಳನ್ನು ರಚಿಸಲಾಗಿದ್ದು, ಒಟ್ಟು ೬೯೯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಸದರಿ ಪಂದ್ಯಾವಳಿಯು ಮುಂದಿನ ಪೀಳಿಗೆಯ ಕ್ರಿಕೆಟ್ ಪ್ರತಿಭೆಗೆ ವೇದಿಯಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಪಂದ್ಯಾವಳಿಯು ಬೆಂಗಳೂರಿನ ಆಚಾರ್ಯ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಪಂದ್ಯಾವಳಿಯ ಪಂದ್ಯಗಳನ್ನು ೯ ಓವರ್ಗಳಿಗೆ ಸೀಮಿತಗೊಳಿಸಿದ್ದು, ಸಂಜೆ. ೭.೩೦ರಿಂದ ೯.೩೦ರವರೆಗೆ ಪಂದ್ಯಗಳು ನಡೆಯಲಿವೆ. ಎಲ್ಲ ಪಂದ್ಯಗಳನ್ನು ಪ್ರಸಾರ ಭಾರತಿಯ ಡಿ.ಡಿ.ಚಂದನದಲ್ಲಿ ನೇರ ಪ್ರಸಾರ ಮಾಡಲಾಗುವುದು. ಈ ಪಂದ್ಯಾವಳಿಯನ್ನು ಮುಂದಿನ ಹಂತಕ್ಕೆ ತಲುಪಿಸುವ ದೃಷ್ಠಿಯಿಂದ ರಾಷ್ಟç ಮಟ್ಟದ ಪಂದ್ಯಾವಳಿಗಳಿಗೆ ಯೋಜನೆ ರೂಪಿಸಲಾಗುತ್ತದೆ. ಇದಕ್ಕಾಗಿ ರಾಜ್ಯದಿಂದ ೨೫ ಮಂದಿಯನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಗೋಷ್ಠಿಯಲ್ಲಿ ಬಾಗೇಗೌಡ, ಮೋಹನ್ಕುಮಾರ್, ಚನ್ನಬಸವಯ್ಯ, ರಾಜಶೇಖರ್, ಗಿರೀಶ್, ಮನು ಇದ್ದರು.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…