ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥರು, ಹೋಳಿ ಹಬ್ಬದ ಆಯೋಜಕರು ಹಾಗೂ ಆಹಾರ ತಯಾರಕಉ ಸೇರಿದಂತೆ ಆರು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮಳವಳ್ಳಿ ಪಟ್ಟಣದಲ್ಲಿ ಶುಕ್ರವಾರದಂದು ಹೋಳಿ ಹಬ್ಬದ ಪ್ರಯುಕ್ತ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬವನ್ನು ಆಯೋಜಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಜು ಎಂಬುವವರ ಹೋಟೆಲ್ನಲ್ಲಿ ತರಕಾರಿ ಪಲಾವ್ ಮಾಡಿಸಲಾಗಿತ್ತು. ಇದನ್ನೇ ಕಾಗೇಪುರದ ಖಾಸಗಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಳಿಕೆ ತರಕಾರಿ ಪಲಾವ್ ಅನ್ನು ನೀಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ತರಕಾರಿ ಪಲಾವ್ ಅನ್ನು ತಿಂದ 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಅಲ್ಲದೇ ಶುಕ್ರವಾರ ಹೋಳಿಯಲ್ಲಿ ಭಾಗಿಯಾಗಿ ಉಪಹಾರ ಸೇವಿಸಿದ 30ಕ್ಕೂ ಅಧಿಕ ಮಂದಿಯೂ ಸಹ ಅಸ್ವಸ್ಥಗೊಂಡಿದ್ದರು.
ಯಾರ ಯಾರ ಮೇಲೆ ಎಫ್ಐಆರ್ ದಾಖಲು
ವಿದ್ಯಾರ್ಥಿಗಳು ಅಸ್ವಸ್ಥರಾದ ಕೇಸ್ ವಿಚಾರವಾಗಿ ಮಳವಳ್ಳಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಅವರು ನೀಡಿದ ದೂರಿನ ಆಧಾರದ ಮೇಲೆ ಹೋಳಿ ಆಯೋಜಕ ಪುಷ್ಪೇಂದ್ರ, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪ ಸಿಬ್ಬಂದಿ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆ ಮುಖ್ಯಸ್ಥ ಲಂಕೇಶ್, ಕಾರ್ಯದರ್ಶಿ ಜಗದೀಶ್ ಹಾಗೂ ಕೆಲಸಗಾರ ಜಗದೀಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…