ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥರು, ಹೋಳಿ ಹಬ್ಬದ ಆಯೋಜಕರು ಹಾಗೂ ಆಹಾರ ತಯಾರಕಉ ಸೇರಿದಂತೆ ಆರು ಮಂದಿಯ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮಳವಳ್ಳಿ ಪಟ್ಟಣದಲ್ಲಿ ಶುಕ್ರವಾರದಂದು ಹೋಳಿ ಹಬ್ಬದ ಪ್ರಯುಕ್ತ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬವನ್ನು ಆಯೋಜಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಜು ಎಂಬುವವರ ಹೋಟೆಲ್ನಲ್ಲಿ ತರಕಾರಿ ಪಲಾವ್ ಮಾಡಿಸಲಾಗಿತ್ತು. ಇದನ್ನೇ ಕಾಗೇಪುರದ ಖಾಸಗಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಳಿಕೆ ತರಕಾರಿ ಪಲಾವ್ ಅನ್ನು ನೀಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ತರಕಾರಿ ಪಲಾವ್ ಅನ್ನು ತಿಂದ 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಅಲ್ಲದೇ ಶುಕ್ರವಾರ ಹೋಳಿಯಲ್ಲಿ ಭಾಗಿಯಾಗಿ ಉಪಹಾರ ಸೇವಿಸಿದ 30ಕ್ಕೂ ಅಧಿಕ ಮಂದಿಯೂ ಸಹ ಅಸ್ವಸ್ಥಗೊಂಡಿದ್ದರು.
ಯಾರ ಯಾರ ಮೇಲೆ ಎಫ್ಐಆರ್ ದಾಖಲು
ವಿದ್ಯಾರ್ಥಿಗಳು ಅಸ್ವಸ್ಥರಾದ ಕೇಸ್ ವಿಚಾರವಾಗಿ ಮಳವಳ್ಳಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಅವರು ನೀಡಿದ ದೂರಿನ ಆಧಾರದ ಮೇಲೆ ಹೋಳಿ ಆಯೋಜಕ ಪುಷ್ಪೇಂದ್ರ, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪ ಸಿಬ್ಬಂದಿ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆ ಮುಖ್ಯಸ್ಥ ಲಂಕೇಶ್, ಕಾರ್ಯದರ್ಶಿ ಜಗದೀಶ್ ಹಾಗೂ ಕೆಲಸಗಾರ ಜಗದೀಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…