ಮಂಡ್ಯ

ಮಂಡ್ಯ; ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿಯೊಳಗಿನ ಕಬ್ಬನ್ನು ಮಾತ್ರ ಖರೀದಿಸಬೇಕು; ಜಿಲ್ಲಾಧಿಕಾರಿ ಡಾ. ಕುಮಾರ

ಮಂಡ್ಯ:  ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ತಮಗೆ ನಿಗಧಿ ಮಾಡಿರುವ ವ್ಯಾಪ್ತಿಯಲ್ಲಿ ಮಾತ್ರ ರೈತರಿಂದ ಕಬ್ಬನ್ನು ಖರೀದಿಸಬೇಕು. ಅನಧಿಕೃತವಾಗಿ ಬೇರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರಿಂದ ಕಬ್ಬು ಖರೀದಿಸಿದರೆ ಅಂತಹ ಸಕ್ಕರೆ ಕಾರ್ಖಾನೆಯ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಡಾ. ಕುಮಾರ ಎಚ್ಚರಿಕೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶುಗರ್ ಫ್ಯಾಕ್ಟರಿ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿ ಬರದ ಹಿನ್ನೆಲೆಯಲ್ಲಿ ಕಬ್ಬಿನ ಇಳುವರಿ ಸಹ ಕಡಿಮೆ ಇರುತ್ತದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವಿಕೆಗೆ ಸ್ಪರ್ಧೆ ಉಂಟಾಗುವ ಸಾಧ್ಯತೆಯಿದ್ದು, ಸಕ್ಕರೆ ಕಾರ್ಖಾನೆಗಳು ಲಾಭ/ ನಷ್ಟ ಯಾವುದೇ ಉಂಟಾದರು ತಮ್ಮ ವ್ಯಾಪ್ತಿಗೆ ನಿಗಧಿಪಡಿಸಿದ ಕಬ್ಬನ್ನು ಮಾತ್ರ ಅರೆಯಬೇಕು ಎಂದರು.

ಏಕ ಕಾಲದಲ್ಲಿ ಕಬ್ಬು ಅರೆಯುವಿಕೆಗೆ ಪ್ರಸ್ತಾವನೆ 2024 – 25 ನೇ ಸಾಲಿನ ಹಂಗಾಮಿನ ಕಬ್ಬು ಅರೆಯುವಿಕೆಗೆ ಸಂಬಂಧಿಸಿದಂತೆ ಯಾವುದಾದರು ಒಂದು ಸಕ್ಕರೆ ಕಾರ್ಖಾನೆ ಬೇರೆ ಸಕ್ಕರೆ ಕಾರ್ಖಾನೆಗಿಂತ ಮೊದಲು ಅರೆಯುವಿಕೆ ಪ್ರಾರಂಭಿಸಿದರೆ ಎಲ್ಲಾ ರೈತರು ತಮ್ಮ ಕಬ್ಬು ಖರೀದಿಸುವಂತೆ ಸಕ್ಕರೆ ಕಾರ್ಖಾನೆಗೆ ಮುಗಿ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ಏಕಕಾಲದಲ್ಲಿ ಕಬ್ಬು ಅರೆಯಲು ಜುಲೈ 15 ರಿಂದ 30 ರವರೆಗೆ ಯಾವುದಾದರು ಒಂದು ದಿನಾಂಕವನ್ನು ನಿಗಧಿಪಡಿಸಿಕೊಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬು ಬೆಳೆಯುವ ಪ್ರಕ್ರಿಯೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಬೇಕು. ರೈತರ ಕುಂದು ಕೊರತೆ ಸಭೆಯಲ್ಲಿ ರೈತರು ಕಬ್ಬು ಬಿತ್ತನೆಗೆ ಸಕ್ಕರೆ ಕಾರ್ಖಾನೆಗಳು ಬಿತ್ತನೆ ಕಬ್ಬು ಒದಗಿಸುವಂತೆ ಚರ್ಚಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ನಡೆಸುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಂತೆ ವರದಿ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಜಂಟಿ ಕೃಷಿ ನಿರ್ದೇಶಕ ಅಶೋಕ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಎಂ ಪಿ ಕೃಷ್ಣಕುಮಾರ್ ಸೇರಿದಂತೆ ವಿವಿಧ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

5 mins ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

8 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

14 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

19 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

23 mins ago

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

1 hour ago