ಮಂಡ್ಯ

ಮಂಡ್ಯ; ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿಯೊಳಗಿನ ಕಬ್ಬನ್ನು ಮಾತ್ರ ಖರೀದಿಸಬೇಕು; ಜಿಲ್ಲಾಧಿಕಾರಿ ಡಾ. ಕುಮಾರ

ಮಂಡ್ಯ:  ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ತಮಗೆ ನಿಗಧಿ ಮಾಡಿರುವ ವ್ಯಾಪ್ತಿಯಲ್ಲಿ ಮಾತ್ರ ರೈತರಿಂದ ಕಬ್ಬನ್ನು ಖರೀದಿಸಬೇಕು. ಅನಧಿಕೃತವಾಗಿ ಬೇರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರಿಂದ ಕಬ್ಬು ಖರೀದಿಸಿದರೆ ಅಂತಹ ಸಕ್ಕರೆ ಕಾರ್ಖಾನೆಯ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಡಾ. ಕುಮಾರ ಎಚ್ಚರಿಕೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶುಗರ್ ಫ್ಯಾಕ್ಟರಿ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿ ಬರದ ಹಿನ್ನೆಲೆಯಲ್ಲಿ ಕಬ್ಬಿನ ಇಳುವರಿ ಸಹ ಕಡಿಮೆ ಇರುತ್ತದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವಿಕೆಗೆ ಸ್ಪರ್ಧೆ ಉಂಟಾಗುವ ಸಾಧ್ಯತೆಯಿದ್ದು, ಸಕ್ಕರೆ ಕಾರ್ಖಾನೆಗಳು ಲಾಭ/ ನಷ್ಟ ಯಾವುದೇ ಉಂಟಾದರು ತಮ್ಮ ವ್ಯಾಪ್ತಿಗೆ ನಿಗಧಿಪಡಿಸಿದ ಕಬ್ಬನ್ನು ಮಾತ್ರ ಅರೆಯಬೇಕು ಎಂದರು.

ಏಕ ಕಾಲದಲ್ಲಿ ಕಬ್ಬು ಅರೆಯುವಿಕೆಗೆ ಪ್ರಸ್ತಾವನೆ 2024 – 25 ನೇ ಸಾಲಿನ ಹಂಗಾಮಿನ ಕಬ್ಬು ಅರೆಯುವಿಕೆಗೆ ಸಂಬಂಧಿಸಿದಂತೆ ಯಾವುದಾದರು ಒಂದು ಸಕ್ಕರೆ ಕಾರ್ಖಾನೆ ಬೇರೆ ಸಕ್ಕರೆ ಕಾರ್ಖಾನೆಗಿಂತ ಮೊದಲು ಅರೆಯುವಿಕೆ ಪ್ರಾರಂಭಿಸಿದರೆ ಎಲ್ಲಾ ರೈತರು ತಮ್ಮ ಕಬ್ಬು ಖರೀದಿಸುವಂತೆ ಸಕ್ಕರೆ ಕಾರ್ಖಾನೆಗೆ ಮುಗಿ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ಏಕಕಾಲದಲ್ಲಿ ಕಬ್ಬು ಅರೆಯಲು ಜುಲೈ 15 ರಿಂದ 30 ರವರೆಗೆ ಯಾವುದಾದರು ಒಂದು ದಿನಾಂಕವನ್ನು ನಿಗಧಿಪಡಿಸಿಕೊಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬು ಬೆಳೆಯುವ ಪ್ರಕ್ರಿಯೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಬೇಕು. ರೈತರ ಕುಂದು ಕೊರತೆ ಸಭೆಯಲ್ಲಿ ರೈತರು ಕಬ್ಬು ಬಿತ್ತನೆಗೆ ಸಕ್ಕರೆ ಕಾರ್ಖಾನೆಗಳು ಬಿತ್ತನೆ ಕಬ್ಬು ಒದಗಿಸುವಂತೆ ಚರ್ಚಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ನಡೆಸುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಂತೆ ವರದಿ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಜಂಟಿ ಕೃಷಿ ನಿರ್ದೇಶಕ ಅಶೋಕ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಎಂ ಪಿ ಕೃಷ್ಣಕುಮಾರ್ ಸೇರಿದಂತೆ ವಿವಿಧ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago