ಮಂಡ್ಯ

ಮಂಡ್ಯ; ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿಯೊಳಗಿನ ಕಬ್ಬನ್ನು ಮಾತ್ರ ಖರೀದಿಸಬೇಕು; ಜಿಲ್ಲಾಧಿಕಾರಿ ಡಾ. ಕುಮಾರ

ಮಂಡ್ಯ:  ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ತಮಗೆ ನಿಗಧಿ ಮಾಡಿರುವ ವ್ಯಾಪ್ತಿಯಲ್ಲಿ ಮಾತ್ರ ರೈತರಿಂದ ಕಬ್ಬನ್ನು ಖರೀದಿಸಬೇಕು. ಅನಧಿಕೃತವಾಗಿ ಬೇರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರಿಂದ ಕಬ್ಬು ಖರೀದಿಸಿದರೆ ಅಂತಹ ಸಕ್ಕರೆ ಕಾರ್ಖಾನೆಯ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಡಾ. ಕುಮಾರ ಎಚ್ಚರಿಕೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶುಗರ್ ಫ್ಯಾಕ್ಟರಿ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿ ಬರದ ಹಿನ್ನೆಲೆಯಲ್ಲಿ ಕಬ್ಬಿನ ಇಳುವರಿ ಸಹ ಕಡಿಮೆ ಇರುತ್ತದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವಿಕೆಗೆ ಸ್ಪರ್ಧೆ ಉಂಟಾಗುವ ಸಾಧ್ಯತೆಯಿದ್ದು, ಸಕ್ಕರೆ ಕಾರ್ಖಾನೆಗಳು ಲಾಭ/ ನಷ್ಟ ಯಾವುದೇ ಉಂಟಾದರು ತಮ್ಮ ವ್ಯಾಪ್ತಿಗೆ ನಿಗಧಿಪಡಿಸಿದ ಕಬ್ಬನ್ನು ಮಾತ್ರ ಅರೆಯಬೇಕು ಎಂದರು.

ಏಕ ಕಾಲದಲ್ಲಿ ಕಬ್ಬು ಅರೆಯುವಿಕೆಗೆ ಪ್ರಸ್ತಾವನೆ 2024 – 25 ನೇ ಸಾಲಿನ ಹಂಗಾಮಿನ ಕಬ್ಬು ಅರೆಯುವಿಕೆಗೆ ಸಂಬಂಧಿಸಿದಂತೆ ಯಾವುದಾದರು ಒಂದು ಸಕ್ಕರೆ ಕಾರ್ಖಾನೆ ಬೇರೆ ಸಕ್ಕರೆ ಕಾರ್ಖಾನೆಗಿಂತ ಮೊದಲು ಅರೆಯುವಿಕೆ ಪ್ರಾರಂಭಿಸಿದರೆ ಎಲ್ಲಾ ರೈತರು ತಮ್ಮ ಕಬ್ಬು ಖರೀದಿಸುವಂತೆ ಸಕ್ಕರೆ ಕಾರ್ಖಾನೆಗೆ ಮುಗಿ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ಏಕಕಾಲದಲ್ಲಿ ಕಬ್ಬು ಅರೆಯಲು ಜುಲೈ 15 ರಿಂದ 30 ರವರೆಗೆ ಯಾವುದಾದರು ಒಂದು ದಿನಾಂಕವನ್ನು ನಿಗಧಿಪಡಿಸಿಕೊಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬು ಬೆಳೆಯುವ ಪ್ರಕ್ರಿಯೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಬೇಕು. ರೈತರ ಕುಂದು ಕೊರತೆ ಸಭೆಯಲ್ಲಿ ರೈತರು ಕಬ್ಬು ಬಿತ್ತನೆಗೆ ಸಕ್ಕರೆ ಕಾರ್ಖಾನೆಗಳು ಬಿತ್ತನೆ ಕಬ್ಬು ಒದಗಿಸುವಂತೆ ಚರ್ಚಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ನಡೆಸುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಂತೆ ವರದಿ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಜಂಟಿ ಕೃಷಿ ನಿರ್ದೇಶಕ ಅಶೋಕ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಎಂ ಪಿ ಕೃಷ್ಣಕುಮಾರ್ ಸೇರಿದಂತೆ ವಿವಿಧ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago