ಮಂಡ್ಯ

ಮಂಡ್ಯ: ಅನೈತಿಕ ಸಂಬಂಧ ಶಂಕೆ, ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಮಗ

ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೇ ಚಾಕುವಿನಿಂದ ದೊಡ್ಡಮ್ಮನ ಕತ್ತು ಕುಯ್ದು ಹತ್ಯೆ ಮಾಡಿದ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ನಡೆದಿದೆ.

ವೃದ್ಧೆ ಕೆಂಪಮ್ಮ(80) ಕೊಲೆಯಾದ ಮಹಿಳೆ. ಕೊಲೆ ಆರೋಪಿ ಹರೀಶ್(‌34). ಎಂಬಾತ ತನ್ನ ತಂದೆಯೊಂದಿಗೆ ವಾಸವಿದ್ದ ದೊಡ್ಡಮ್ಮನನ್ನು ಹತ್ಯೆ ಮಾಡಿ ಬಳಿಕ, ಪೊಲೀಸರಿಗೆ ಶರಣಾಗಿದ್ದಾನೆ.

ಮೃತ ವೃದ್ಧೆ ಕೆಂಪಮ್ಮ ಗಂಡ ತೀರಿಹೋದ ನಂತರ ಆರೋಪಿಯ ತಂದೆ ರಾಮಕೃಷ್ಣ ಆಸರೆ ನೀಡಿ, ಹಲವು ವರ್ಷಗಳಿಂದ ಜೊತೆಗೆ ವಾಸವಾಗಿದ್ದರು. ಆರೋಪಿ ಹರೀಶ್‌ ತಂದೆ ತಾಯಿ ಬೇರೆಯಾಗಲೂ ಕೆಂಪಮ್ಮ ಕಾರಣ ಎಂಬ ದ್ವೇಷ ಕೂಡ ಇತ್ತು. ಕುಡಿದ ಮತ್ತಿನಲ್ಲಿ ಮಾತಿನ ಚಕಮಕಿ ನಡೆದು ಕೊನೆಗೆ ದೊಡ್ಡಮ್ಮನ್ನು ಹರೀಶ್‌ ಹತ್ಯೆ ಮಾಡಿದ್ದಾನೆ. ಬಳಿಕ ತಂದೆ ರಾಮಕೃಷ್ಣಗೆ ಕೆಂಪಮ್ಮನನ್ನು ಕೊಲೆಯ ಮಾಹಿತಿ ನೀಡಿದ್ದಾನೆ.

ಸ್ಥಳಕ್ಕೆ ಎಸ್‌ಪಿ ಯತೀಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಡ್ಯ ಸೆಂಟ್ರಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

43 mins ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

2 hours ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

4 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

4 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

5 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

5 hours ago