ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೇ ಚಾಕುವಿನಿಂದ ದೊಡ್ಡಮ್ಮನ ಕತ್ತು ಕುಯ್ದು ಹತ್ಯೆ ಮಾಡಿದ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ನಡೆದಿದೆ.
ವೃದ್ಧೆ ಕೆಂಪಮ್ಮ(80) ಕೊಲೆಯಾದ ಮಹಿಳೆ. ಕೊಲೆ ಆರೋಪಿ ಹರೀಶ್(34). ಎಂಬಾತ ತನ್ನ ತಂದೆಯೊಂದಿಗೆ ವಾಸವಿದ್ದ ದೊಡ್ಡಮ್ಮನನ್ನು ಹತ್ಯೆ ಮಾಡಿ ಬಳಿಕ, ಪೊಲೀಸರಿಗೆ ಶರಣಾಗಿದ್ದಾನೆ.
ಮೃತ ವೃದ್ಧೆ ಕೆಂಪಮ್ಮ ಗಂಡ ತೀರಿಹೋದ ನಂತರ ಆರೋಪಿಯ ತಂದೆ ರಾಮಕೃಷ್ಣ ಆಸರೆ ನೀಡಿ, ಹಲವು ವರ್ಷಗಳಿಂದ ಜೊತೆಗೆ ವಾಸವಾಗಿದ್ದರು. ಆರೋಪಿ ಹರೀಶ್ ತಂದೆ ತಾಯಿ ಬೇರೆಯಾಗಲೂ ಕೆಂಪಮ್ಮ ಕಾರಣ ಎಂಬ ದ್ವೇಷ ಕೂಡ ಇತ್ತು. ಕುಡಿದ ಮತ್ತಿನಲ್ಲಿ ಮಾತಿನ ಚಕಮಕಿ ನಡೆದು ಕೊನೆಗೆ ದೊಡ್ಡಮ್ಮನ್ನು ಹರೀಶ್ ಹತ್ಯೆ ಮಾಡಿದ್ದಾನೆ. ಬಳಿಕ ತಂದೆ ರಾಮಕೃಷ್ಣಗೆ ಕೆಂಪಮ್ಮನನ್ನು ಕೊಲೆಯ ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…