ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೇ ಚಾಕುವಿನಿಂದ ದೊಡ್ಡಮ್ಮನ ಕತ್ತು ಕುಯ್ದು ಹತ್ಯೆ ಮಾಡಿದ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ನಡೆದಿದೆ.
ವೃದ್ಧೆ ಕೆಂಪಮ್ಮ(80) ಕೊಲೆಯಾದ ಮಹಿಳೆ. ಕೊಲೆ ಆರೋಪಿ ಹರೀಶ್(34). ಎಂಬಾತ ತನ್ನ ತಂದೆಯೊಂದಿಗೆ ವಾಸವಿದ್ದ ದೊಡ್ಡಮ್ಮನನ್ನು ಹತ್ಯೆ ಮಾಡಿ ಬಳಿಕ, ಪೊಲೀಸರಿಗೆ ಶರಣಾಗಿದ್ದಾನೆ.
ಮೃತ ವೃದ್ಧೆ ಕೆಂಪಮ್ಮ ಗಂಡ ತೀರಿಹೋದ ನಂತರ ಆರೋಪಿಯ ತಂದೆ ರಾಮಕೃಷ್ಣ ಆಸರೆ ನೀಡಿ, ಹಲವು ವರ್ಷಗಳಿಂದ ಜೊತೆಗೆ ವಾಸವಾಗಿದ್ದರು. ಆರೋಪಿ ಹರೀಶ್ ತಂದೆ ತಾಯಿ ಬೇರೆಯಾಗಲೂ ಕೆಂಪಮ್ಮ ಕಾರಣ ಎಂಬ ದ್ವೇಷ ಕೂಡ ಇತ್ತು. ಕುಡಿದ ಮತ್ತಿನಲ್ಲಿ ಮಾತಿನ ಚಕಮಕಿ ನಡೆದು ಕೊನೆಗೆ ದೊಡ್ಡಮ್ಮನ್ನು ಹರೀಶ್ ಹತ್ಯೆ ಮಾಡಿದ್ದಾನೆ. ಬಳಿಕ ತಂದೆ ರಾಮಕೃಷ್ಣಗೆ ಕೆಂಪಮ್ಮನನ್ನು ಕೊಲೆಯ ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…