ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲೋಕೇಶ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಶ್ವೇತಾ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ.
ಇದನ್ನು ಓದಿ: ಹಳೇ ವೈಷಮ್ಯ : ಚಿಕ್ಕಪ್ಪನನ್ನೇ ಹತ್ಯೆಗೈದ ಅಣ್ಣನ ಮಕ್ಕಳು
17 ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದರು. ಪತ್ನಿ ಶ್ವೇತಾ ಮೇಲೆ ತೀರ ಅನುಮಾನ ಪಡುತ್ತಿದ್ದ ಲೋಕೇಶ್ ಪದೇ ಪದೇ ಜಗಳ ಆಡುತ್ತಿದ್ದ. ಜಗಳ ತಾರಕ್ಕೇರಿಪತಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಲೋಕೇಶ್ನನ್ನು ಬಂಧಿಸಿದ್ದಾರೆ.





