ಮಂಡ್ಯ: ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ (ವಿ.ಸಿ) ಬಿದ್ದದ್ದ ಕಾರಿನ ಚಾಲಕನ ಶವ ಇಂದು (ಶುಕ್ರವಾರ) ಪತ್ತೆಯಾಗಿದೆ.
ತೀವ್ರ ಹುಟುಕಾಟದ ನಂತರ ಘಟನಾ ಸ್ಥಳದ ಸಮೀಪದ ಸೇತುವೆ ಬಳಿ ಚಾಲಕ ಮೃತ ದೇಹ ಪತ್ತೆಯಾಗಿದೆ. ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಮಾಡಿದ ನಂತರ ಶವ ನೀರಿನಲ್ಲಿ ಕಂಡುಬಂದಿದೆ.
ಈ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತರಾಗಿದ್ದಾರೆ.
ಕೆಆಎಸ್ನಿಂದ ವಿಶ್ವೇಶ್ವರಯ್ಯ ನಾಲೆಗೆ ನೀರು ಬಿಟ್ಟಿರುವುದರಿಂದ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ. ಅಲ್ಲದೆ, ನಾಲೆಯ ಆಳ 18 ಅಡಿ ಇರುವುದರಿಂದ ಕಾರು ನೀರಿನಲ್ಲಿ ಮುಳುಗಿತ್ತು. ಅಗ್ನಿಶಾಮಕ ದಳದವರು ಕಾರನ್ನು ನೀರಿನಿಂದ ಮೇಲೆತ್ತಿದ್ದಾರೆ.
ಶಿವಳ್ಳಿಯಲ್ಲಿ ಮೆಡಿಕಲ್ ಶಾಪ್ ಹೊಂದಿದ್ದ ಲೋಕೇಶ್ ಜತೆಗೆ ವ್ಯವಸಾಯ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಗುರುವಾರ ಕಾರಿನಲ್ಲಿ ಪಾಂಡವ ಪುರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ತಿಬ್ಬನಹಳ್ಳಿ ಮೂಲಕ ಹಾದು ಹೋಗುವಾಗ, ವಿಶ್ವೇಶ್ವರಯ್ಯ ನಾಲೆ ಬಳಿ ಕಾರು ನಿಯಂತ್ರಣ ತಪ್ಪಿ ನಾಲೆಯೊಳಗೆ ಬಿದ್ದಿದೆ.
ಈ ಘಟನೆ ನಡೆಯಲು ಕಾಲುವೆಗೆ ತಡೆಗೋಡೆ ಇಲ್ಲದಿರುವುದೇ ಕಾರಣ ಎನ್ನಲಾಗಿದೆ.
ಕಾರು ಬಿದ್ದಾಕ್ಷಣ ಗಾಬರಿಗೊಂಡ ಲೋಕೇಶ್ ಎಚ್ಚೆತ್ತುಕೊಂಡು ಹೊರಗೆ ಬರುವಷ್ಟರಲ್ಲಿಯೇ ಕಾರು ನೀರಿನಲ್ಲಿ ಮುಳುಗಿದೆ. ನೀರು ರಭಸವಾಗಿ ಹರಿಯುತ್ತಿದ್ದರಿಂದ ದಡ ಸೇರಲಾಗದೆ ಕೊಚ್ಚಿ ಕೊಂಡು ಹೋಗಿರಬಹುದು ಎನ್ನಲಾಗುತ್ತಿದ್ದು, ಲೋಕೇಶ್ ಗಾಘಗಿ ಸ್ಥಳೀಯ ಈಜುಗಾರರು, ಅಗ್ನಿಶಾಮಕ ಸಿಬ್ಬಂದಿಗಳಿಂದ ನಿನ್ನೆ ರಾತ್ರಿ 8:30ರ ವರೆಗೂ ಹುಡುಕಾಟ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಸುಮಾರು 7.45 ಕ್ಕೆ ನಾಲೆಯ ಸಮೀಪ ಲೋಕೇಶ್ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಕಾರನ್ನು ಹೊರಗೆ ತೆಗೆದಿದ್ದು, ಲೋಕೇಶ್ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಲುವೆಯ ನೀರನ್ನು ಕಡಿಮೆ ಮಾಡಲು ನೀರಾವರಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.
ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…