ಮಂಡ್ಯ: ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ (ವಿ.ಸಿ) ಬಿದ್ದದ್ದ ಕಾರಿನ ಚಾಲಕನ ಶವ ಇಂದು (ಶುಕ್ರವಾರ) ಪತ್ತೆಯಾಗಿದೆ.
ತೀವ್ರ ಹುಟುಕಾಟದ ನಂತರ ಘಟನಾ ಸ್ಥಳದ ಸಮೀಪದ ಸೇತುವೆ ಬಳಿ ಚಾಲಕ ಮೃತ ದೇಹ ಪತ್ತೆಯಾಗಿದೆ. ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಮಾಡಿದ ನಂತರ ಶವ ನೀರಿನಲ್ಲಿ ಕಂಡುಬಂದಿದೆ.
ಈ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತರಾಗಿದ್ದಾರೆ.
ಕೆಆಎಸ್ನಿಂದ ವಿಶ್ವೇಶ್ವರಯ್ಯ ನಾಲೆಗೆ ನೀರು ಬಿಟ್ಟಿರುವುದರಿಂದ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ. ಅಲ್ಲದೆ, ನಾಲೆಯ ಆಳ 18 ಅಡಿ ಇರುವುದರಿಂದ ಕಾರು ನೀರಿನಲ್ಲಿ ಮುಳುಗಿತ್ತು. ಅಗ್ನಿಶಾಮಕ ದಳದವರು ಕಾರನ್ನು ನೀರಿನಿಂದ ಮೇಲೆತ್ತಿದ್ದಾರೆ.
ಶಿವಳ್ಳಿಯಲ್ಲಿ ಮೆಡಿಕಲ್ ಶಾಪ್ ಹೊಂದಿದ್ದ ಲೋಕೇಶ್ ಜತೆಗೆ ವ್ಯವಸಾಯ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಗುರುವಾರ ಕಾರಿನಲ್ಲಿ ಪಾಂಡವ ಪುರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ತಿಬ್ಬನಹಳ್ಳಿ ಮೂಲಕ ಹಾದು ಹೋಗುವಾಗ, ವಿಶ್ವೇಶ್ವರಯ್ಯ ನಾಲೆ ಬಳಿ ಕಾರು ನಿಯಂತ್ರಣ ತಪ್ಪಿ ನಾಲೆಯೊಳಗೆ ಬಿದ್ದಿದೆ.
ಈ ಘಟನೆ ನಡೆಯಲು ಕಾಲುವೆಗೆ ತಡೆಗೋಡೆ ಇಲ್ಲದಿರುವುದೇ ಕಾರಣ ಎನ್ನಲಾಗಿದೆ.
ಕಾರು ಬಿದ್ದಾಕ್ಷಣ ಗಾಬರಿಗೊಂಡ ಲೋಕೇಶ್ ಎಚ್ಚೆತ್ತುಕೊಂಡು ಹೊರಗೆ ಬರುವಷ್ಟರಲ್ಲಿಯೇ ಕಾರು ನೀರಿನಲ್ಲಿ ಮುಳುಗಿದೆ. ನೀರು ರಭಸವಾಗಿ ಹರಿಯುತ್ತಿದ್ದರಿಂದ ದಡ ಸೇರಲಾಗದೆ ಕೊಚ್ಚಿ ಕೊಂಡು ಹೋಗಿರಬಹುದು ಎನ್ನಲಾಗುತ್ತಿದ್ದು, ಲೋಕೇಶ್ ಗಾಘಗಿ ಸ್ಥಳೀಯ ಈಜುಗಾರರು, ಅಗ್ನಿಶಾಮಕ ಸಿಬ್ಬಂದಿಗಳಿಂದ ನಿನ್ನೆ ರಾತ್ರಿ 8:30ರ ವರೆಗೂ ಹುಡುಕಾಟ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಸುಮಾರು 7.45 ಕ್ಕೆ ನಾಲೆಯ ಸಮೀಪ ಲೋಕೇಶ್ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಕಾರನ್ನು ಹೊರಗೆ ತೆಗೆದಿದ್ದು, ಲೋಕೇಶ್ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಲುವೆಯ ನೀರನ್ನು ಕಡಿಮೆ ಮಾಡಲು ನೀರಾವರಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.
ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…